Advertisement

ಬಿಎಸ್‌ವೈ –ನಳಿನ್‌ ಮಾತುಕತೆ: ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ಚರ್ಚೆ?

12:16 AM Jul 11, 2022 | Team Udayavani |

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಬೆಂಗಳೂರಿನಲ್ಲಿ ರವಿವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

Advertisement

ಸುಮಾರು 15 ದಿನಗಳ ಕಾಲ ವಿದೇಶ ಪ್ರವಾಸ ಕೈಗೊಂಡಿದ್ದ ಯಡಿಯೂರಪ್ಪ ಅವರೊಂದಿಗೆ ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರ ನೇಮಕಾತಿ ಕುರಿತು ಹಾಗೂ ಎರಡನೇ ಹಂತದಲ್ಲಿ ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುವ ವೇಳಾಪಟ್ಟಿ ಸಿದ್ಧಪಡಿಸುವ ಬಗ್ಗೆಯೂ ಚರ್ಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯದಲ್ಲಿ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಬಂಧನವಾಗಿರುವುದಕ್ಕೆ ಸಂಬಂಧಿಸಿ ಕಾಂಗ್ರೆಸ್‌ ನಾಯಕರ ಆರೋಪಗಳ ಬಗ್ಗೆಯೂ ಚರ್ಚೆ ನಡೆಯಿತು ಎಂದು ತಿಳಿದು ಬಂದಿದೆ.

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next