Advertisement

ಸಿದ್ದರಾಮಯ್ಯ ಆಕಸ್ಮಾತ್ ಗೆದ್ದರೂ ವಿರೋಧ ಪಕ್ಷದಲ್ಲೇ ಕೂರಿಸುತ್ತೇನೆ: ಯಡಿಯೂರಪ್ಪ

11:32 AM Sep 13, 2021 | Team Udayavani |

ಬೆಂಗಳೂರು: ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರು ಆಕಸ್ಮಾತಾಗಿ ಗೆದ್ದರೂ ಅವರನ್ನು ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗುವ ಕಾರಣದಿಂದ ಸಿಎಂ ಬೊಮ್ಮಾಯಿ ಜೊತೆ ಬಿಎಸ್ ವೈ ಮಾತುಕತೆ ನಡೆಸಿದರು. ಯಡಿಯೂರಪ್ಪನವರು ಸಿಎಂ ಸ್ಥಾನದಿಂದ‌ ಕೆಳಗಿಳಿದ ಬಳಿಕ ಇದೇ ಮೊದಲ ಬಾರಿಗೆ ಅಧಿವೇಶನದಲ್ಲಿ ಭಾಗವಹಿಸುತ್ತಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ ನಾಯಕರ ಎತ್ತಿನ ಗಾಡಿ ಪ್ರತಿಭಟನೆಗೆ ಸಿಎಂ ಬೊಮ್ಮಾಯಿ ಕಿಡಿ

ಬೊಮ್ಮಾಯಿ ಅವರು ಸಿಎಂ ಆಗಿ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಎಲ್ಲಾ ರೀತಿಯ ಸಹಕಾರ ಕೊಡಲು ಸಿದ್ದನಿದ್ದೇನೆ. ಬರುವ ದಿನಗಳಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇವೆ. ರಾಜ್ಯದ್ಯಾಂತ ಪ್ರವಾಸ ಮಾಡಿ ಬಿಜೆಪಿ ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇವೆ. ನಾವು ನಮ್ಮ ಅಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಮಾಡ್ತೇವೆ ಎಂದು ಬಿಎಸ್ ವೈ ಹೇಳಿದರು.

ಒಬ್ಬ ಶಾಸಕನಾಗಿ ಕೆಲಸ ಮಾಡುತ್ತೇನೆ. ಮುಖ್ಯಮಂತ್ರಿಯಾಗಿಯೇ ಕೆಲಸ ಮಾಡಬೇಕು ಎಂದೇನಿಲ್ಲ. ಸರ್ಕಾರದ ಒಳ್ಳೆಯ ಕೆಲಸಗಳನ್ನು ಶ್ಲಾಘಿಸುತ್ತೇನೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next