Advertisement

ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರುವುದು ಖಚಿತ: B. S. Yediyurappa

10:13 PM Apr 25, 2023 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಸ್ಪಷ್ಟ ಬಹುಮತ ಪಡೆದು ಆಡಳಿತಕ್ಕೆ ಬರಲಿದೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Advertisement

ಮಂಗಳವಾರ ನಗರದ ಗೋಕುಲ ರಸ್ತೆಯ ಖಾಸಗಿ ಹೊಟೇಲ್ ನಲ್ಲಿ ಹಮ್ಮಿಕೊಂಡಿದ್ದ ಲಿಂಗಾಯತ ಮುಖಂಡರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಹುಬ್ಬಳ್ಳಿ ಕಾರ್ಯಕರ್ತರೊಂದಿಗೆ ಇಂದು ಸಮಾಲೋಚನೆ ನಡೆಸಿ ಚರ್ಚಿಸಲಾಗುವುದು. ಬುಧವಾರವೂ ಬೇರೆ ಬೇರೆ ಕಡೆ ರ್ಯಾಲಿ, ಸಭೆ ನಡೆಸಿ ಪ್ರಚಾರ ನಡೆಸಲಾಗುವುದು. ಎಲ್ಲೆಡೆಯಿಂದ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.

ಮುಸ್ಲಿಂ ಮತಗಳು ಬೇಡ ಎಂಬ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅದು ಅವರ ವೈಯಕ್ತಿಕ ಹೇಳಿಕೆ. ಅದಕ್ಕೂ ಪಕ್ಷಕ್ಕೂ ಯಾವ ಸಂಬಂಧವಿಲ್ಲ. ಬಿಜೆಪಿಗೆ ಎಲ್ಲ ಸಮುದಾಯದವರ ಬೆಂಬಲವಿದೆ ಎಂದರು.

ಮುಂದಿನ ಮುಖ್ಯಮಂತ್ರಿ ಸಿ.ಟಿ. ರವಿ ಎಂಬ ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ಯಡಿಯೂರಪ್ಪ ನಿರಾಕರಿಸಿದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next