Advertisement

ಹುಬ್ಬಳ್ಳಿ: ಕರ್ತವ್ಯಕ್ಕೆ ತೆರಳಿದ್ದ ಬಿ.ಎಸ್.ಎಫ್ ಯೋಧ ಹೃದಯಘಾತದಿಂದ ನಿಧನ

12:14 PM Aug 28, 2022 | Team Udayavani |

ಹುಬ್ಬಳ್ಳಿ: ಕಳೆದ ಐದು ದಿನಗಳ ಹಿಂದೆ ಕರ್ತವ್ಯಕ್ಕೆ ತೆರಳಿದ್ದ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದ ಬಿ.ಎಸ್.ಎಫ್ ಯೋಧ ಗಂಗಾಧರಯ್ಯ ಹಿರೇಮಠ ಅವರು  ಕರ್ತವ್ಯದ ವೇಳೆ ಹೃದಯಘಾತದಿಂದ ನಿಧನರಾಗಿದ್ದಾರೆ.

Advertisement

ಪಶ್ಚಿಮ ಬಂಗಾಳದ ಕುಚ್ ಬಿಹಾರ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆ.27 ರಂದು ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಸೇನೆಯ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಯೋಧ ಗಂಗಾಧರಯ್ಯ ಹಿರೇಮಠ ಅವರ ಮೃತ ದೇಹವನ್ನು ದೇಹಲಿಯಿಂದ  ಮೂಲಕ ಬೆಂಗಳೂರಿಗೆ ಬರಲಿದ್ದು ಅಲ್ಲಿಂದ ಸೇನೆಯ ವಾಹನದ ಮೂಲಕ ಗ್ರಾಮಕ್ಕೆ ಬರುವ ನಿರೀಕ್ಷೆಯಿದೆ. ಇಲ್ಲಿಗೆ ಬರುವುದರೊಳಗೆ ರಾತ್ರಿಯಾಗುವ ಹಿನ್ನೆಲೆಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಮಸ್ಯೆಯಾಗಬಾರದು ಎನ್ನುವ ಕಾರಣಕ್ಕೆ ಸೋಮವಾರ (ಆ.28) ಬೆಳಿಗ್ಗೆ ಹುಬ್ಬಳ್ಳಿಯಿಂದ ಗ್ರಾಮಕ್ಕೆ ಕರೆದೊಯ್ಯುವ ಇಂಗಿತವನ್ನು ಕುಟುಂಬದ ಸದಸ್ಯರು ವ್ಯಕ್ತಪಡಿಸಿದ್ದಾರೆ.

ರಜೆ ಮೇಲೆ ಆಗಮಿಸಿದ್ದ ಗಂಗಾಧರಯ್ಯ ಅವರು ಮಂಗಳವಾರ (ಆ.23) ರಂದು ಕರ್ತವ್ಯಕ್ಕೆ ತೆರಳಿದ್ದರು. ಇತ್ತೀಚಗಷ್ಟೇ ಮನೆಗೆ ಬಂದು ಹೋಗಿದ್ದ ಯೋಧನ ಅಗಲಿಕೆಯಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಕಳೆದ 28 ವರ್ಷಗಳಿಂದ ಸೇವೆಯಲ್ಲಿದ್ದರು. ಇನ್ನೆರಡು ವರ್ಷದಲ್ಲಿ ಸ್ವಯಂ ನಿವೃತ್ತಿ ಪಡೆದು ಬರುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದರು. ಗಂಗಾಧರಯ್ಯ ಅವರು ಪತ್ನಿ ಹಾಗೂ ಎಸ್.ಎಸ್.ಎಲ್.ಸಿ ಓದುತ್ತಿರುವ ಪುತ್ರಿಯಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next