Advertisement

Chhattisgarh; ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಬಿಎಸ್‌ಎಫ್ ಯೋಧ ಹುತಾತ್ಮ

04:05 PM Dec 14, 2023 | Team Udayavani |

ಕಂಕೇರ್(ಛತ್ತೀಸ್‌ಗಢ): ನಕ್ಸಲೀಯರು ಗುರುವಾರ ನಡೆಸಿದ ಸ್ಫೋಟದಲ್ಲಿ ಗಡಿ ಭದ್ರತಾ ಪಡೆಯ ಒಬ್ಬ ಯೋಧ ಹುತಾತ್ಮನಾಗಿದ್ದು , ಎರಡು ದಿನಗಳಲ್ಲಿ ಇದು ಎರಡನೇ ಬಲಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಬಿಎಸ್‌ಎಫ್ ಮತ್ತು ಜಿಲ್ಲಾ ಪೊಲೀಸ್ ಪಡೆಯ ಜಂಟಿ ತಂಡ ಗಸ್ತು ತಿರುಗುತ್ತಿದ್ದಾಗ ಪರತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸದಕ್ಟೋಲಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಬಿಎಸ್‌ಎಫ್ ಹೆಡ್ ಕಾನ್‌ಸ್ಟೆಬಲ್ ಉತ್ತರ ಪ್ರದೇಶದ ಅಖಿಲೇಶ್ ರಾಯ್ (45) ಗಾಯಗೊಂಡಿದ್ದರುಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು ಮತ್ತು ಹೆಚ್ಚಿನ ವೈದ್ಯಕೀಯ ಆರೈಕೆಗಾಗಿ ಪಖಂಜೂರ್‌ಗೆ ಕರೆದೊಯ್ಯಲಾದರೂ ಕೊನೆಯುಸಿರೆಳೆದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಬಿಎಸ್ಎಫ್, ಜಿಲ್ಲಾ ರಿಸರ್ವ್ ಗಾರ್ಡ್ ಮತ್ತು ಜಿಲ್ಲಾ ಪೊಲೀಸ್ ಪಡೆಗಳ ಜಂಟಿ ತಂಡದಿಂದ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಬುಧವಾರ ರಾಜ್ಯದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಸಿಬಂದಿಯ ತಂಡದ ಮೇಲೆ ನಕ್ಸಲೀಯರು ದಾಳಿ ನಡೆಸಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ ನಂತರ ಛತ್ತೀಸ್‌ಗಢ ಸಶಸ್ತ್ರ ಪಡೆ (ಸಿಎಎಫ್) ಯೋಧ ಮೃತಪಟ್ಟು ಮತ್ತೊಬ್ಬ ಗಾಯಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next