Advertisement

ಗುವಾಹಟಿಯಲ್ಲಿ ವಿಜಯಪುರದ ಬಿಎಸ್ಎಫ್ ಯೋಧ ಹೃದಯಾಘಾತದಿಂದ ಸಾವು

09:13 PM Oct 18, 2020 | sudhir |

ವಿಜಯಪುರ: ಜಿಲ್ಲೆಯ ತಿಕೋಟಾ ತಾಲ್ಲೂಕಿನ ರತ್ನಾಪುರ ಗ್ರಾಮದ ಬಿ.ಎಸ್ಎಫ್ ಯೋಧ ಹಣಮಂತ ಮಲ್ಲಪ್ಪ ಮುಂಜೆ ( 40 ) ರವಿವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Advertisement

ಆಸ್ಸಾಂ ರಾಜ್ಯದ ಗುವಾಹಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರವಿವಾರ ಬೆಳಗ್ಗೆ ಕರ್ತವ್ಯ ಮುಗಿಸಿ ಮನೆಗೆ ಬಂದು ಚಹಾ ಕುಡಿಯುವಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತ ಯೋಧರು ಪತ್ನಿ, ಓರ್ವ ಪುತ್ರಿ ಜೊತೆ ಗುವಾಹಟಿ‌ ನಗರದಲ್ಲೇ ನೆಲೆಸಿದ್ದರು. ಯೋಧನಿಗೆ ತಂದೆ ತಾಯಿ, ಇಬ್ಬರು ಸಹೋದರರು, ಓರ್ವ ಸಹೋದರಿ ಇದ್ದಾರೆ.

ಯೋಧನ ಸಾವಿನ ಸುದ್ದಿ ತಿಳಿಯುತ್ತಲೇ ರತ್ನಾಪುರ ಗ್ರಾಮದಲ್ಲಿ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ . ಗ್ರಾಮ ಶೋಕಸಾಗರದಲ್ಲಿ ಮುಳುಗಿದೆ.

ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತ ಯೋದನ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಹಾಗೂ‌ ಕಂದಾಯ ಅಧಿಕಾರಿಗಳು ನಿರ್ಧಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next