Advertisement
ಶಾಸಕ ಗುರು ಪಾಟೀಲರ ಅಸಂಖ್ಯೆ ಅಭಿಮಾನಿಗಳು, ಯುವ ಕಾರ್ಯಕರ್ತರು ಕಳೆದ ಹದಿನೈದು ದಿನಗಳಿಂದ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಶಾಸಕ ಗುರು ಪಾಟೀಲ ಶಿರವಾಳರ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಶಹಾಪುರ ಮತಕ್ಷೇತ್ರದಲ್ಲಿ ಕಮಲ ಅರಳಿಸಲು ಕಾರ್ಯ ಪಡೆಸಜ್ಜಾಗಿದೆ.
ಪಾರ್ಕಿಂಗ್ಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದಲ್ಲಿ ಪಾಲ್ಗೊಳ್ಳುವವರಿಗೆ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಿ.ಪಿ.ಎಸ್. ಶಾಲಾ ಮೈದಾನದಲ್ಲಿ ವ್ಯವಸ್ಥಿತವಾದ ವೇದಿಕೆ ಸಜ್ಜುಗೊಂಡಿದೆ.