Advertisement

ಬಿಎಸ್‌ಕೆಬಿ ಅಸೋಸಿಯೇಶನ್‌ ಗೋಕುಲದಿಂದ ಸಂಕ್ರಾಂತಿ ಸಂಭ್ರಮ

02:29 PM Jan 17, 2018 | Team Udayavani |

ಮುಂಬಯಿ: ಬಿಎಸ್‌ಕೆಬಿ ಅಸೋಸಿಯೇಶನ್‌ ಮುಂಬಯಿ ಗೋಕುಲ ಮತ್ತು ಗೋಪಾಲಕೃಷ್ಣ ಪಬ್ಲಿಕ್‌ ಟ್ರಸ್ಟ್‌ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜ. 14 ರಂದು ಅಂಧೇರಿ ಪಶ್ಚಿಮದ ಇರ್ಲಾದ ಶ್ರೀ  ಅದಮಾರು ಮಠದಲ್ಲಿ ಮಕರ ಸಂಕ್ರಾಂತಿ ಸಂಭ್ರಮವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು. ಆಚರಿಸಿತು.

Advertisement

ಸಾಂಸ್ಕೃತಿಕ  ಕಾರ್ಯಕ್ರಮದ ಅಂಗವಾಗಿ ವಿದುಷಿ ಸಹನಾ ಭಾರದ್ವಾಜ್‌ ಬಳಗದಿಂದ ನೃತ್ಯಾರ್ಪಣೆ ಹಾಗೂ  ಅಸೋಸಿಯೇಶನ್‌ನ ಸದಸ್ಯೆಯರು ಸಂಕ್ರಾಂತಿ ನೃತ್ಯಗಳನ್ನು ಪ್ರದರ್ಶಿಸಿ ಮನರಂಜನೆ ನೀಡಿದರು. ಸೇರಿದ್ದ ನೂರಾರು ಮಹಿಳೆಯರು ಬಳೆ, ಅಡಿಕೆ-ವೀಳ್ಯದೆಲೆ, ಎಳ್ಳುಂಡೆ ನೀಡಿ ಪರಸ್ಪರ ಹಣೆಗೆ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಅರಸಿನ ಕುಂಕುಮ ಕಾರ್ಯಕ್ರಮ ನಡೆಸಿಕೊಟ್ಟರು. ಬಿಎಸ್‌ಕೆಬಿಎ ಅಧ್ಯಕ್ಷ ಡಾ| ಸುರೇಶ್‌ ಎಸ್‌. ರಾವ್‌ ಕಟೀಲು ಮತ್ತು ಉಭಯ ಸಂಸ್ಥೆಗಳ ಪದಾಧಿಕಾರಿಗಳ ಸಾರಥ್ಯದಲ್ಲಿ ನಡೆಸಲ್ಪಟ್ಟ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗಧ್ಯಕ್ಷೆ ಐ. ಕೆ. ಪ್ರೇಮಾ ಎಸ್‌. ರಾವ್‌ ಕಾರ್ಯಕ್ರಮ ನಿರೂಪಿಸಿದರು. ಆಶಾ ಎಚ್‌. ಭಟ್‌ ಮತ್ತು ಡಾ| ಸಹನಾ ಎ. ಪೋತಿ ಅವರು ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು.  ಜೊತೆ ಕಾರ್ಯದರ್ಶಿ ಪಿ. ಸಿ. ಎನ್‌. ರಾವ್‌ ವಂದಿಸಿದರು. 

ಚಿತ್ರ-ವರದಿ:ರೋನ್ಸ್‌ ಬಂಟ್ವಾಳ್‌

Advertisement

Udayavani is now on Telegram. Click here to join our channel and stay updated with the latest news.

Next