Advertisement

ಬಿಎಸ್‌ಎನ್‌ಎಲ್‌ ಮುಚ್ಚಲ್ಲ: ಸ್ಪಷ್ಟನೆ

07:11 AM Jun 29, 2019 | Team Udayavani |

ಬೆಂಗಳೂರು: “ಬಿಎಸ್‌ಎನ್‌ಎಲ್‌ ಮುಚ್ಚುವ ಕುರಿತು ಆಧಾರ ರಹಿತ ಸುದ್ದಿಗಳು ಕೇಳಿಬರುತ್ತಿದ್ದು ಈ ಬಗ್ಗೆ ಗ್ರಾಹಕರು ಕಿವಿಗೊಡುವ ಅಗತ್ಯವಿಲ್ಲ’ ಎಂದು ಭಾರತ್‌ ಸಂಚಾರ್‌ ನಿಗಮ ಲಿಮಿಟೆಡ್‌ನ‌ ಕರ್ನಾಟದ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುನೀಲ್‌ ಕುಮಾರ್‌ ಮಿಶ್ರಾ ಸ್ಪಷ್ಟಪಡಿಸಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಎಸ್‌ಎನ್‌ಎಲ್‌ಗೆ ಪುನರ್‌ಜೀವ ನೀಡುವ ಕುರಿತು ಕೇಂದ್ರ ಸರ್ಕಾರ ಈಗಾಗಲೇ ಭರವಸೆ ನೀಡಿದೆ. ಆದರೂ ಈ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಈ ಬಗ್ಗೆ ಗ್ರಾಹಕರು ಕಿವಿಗೊಡುವ ಅಗತ್ಯವಿಲ್ಲ. ಗ್ರಾಹಕರ ಸೇವೆಗೆ ಬಿಎಸ್‌ಎನ್‌ಎಲ್‌ ಸದಾ ಕಟಿಬದ್ಧವಾಗಿರುತ್ತದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next