Advertisement

ಮೈತ್ರಿ ಇಲ್ಲ… ಚುನಾವಣೆಯಲ್ಲಿ ನಮ್ಮ ಪಕ್ಷ ಸ್ವತಂತ್ರವಾಗಿ ಸ್ಫರ್ದಿಸಲಿದೆ: ಮಾಯಾವತಿ

01:46 PM Feb 19, 2024 | Team Udayavani |

ಉತ್ತರಪ್ರದೇಶ: ಲೋಕಸಭೆ ಚುನಾವಣೆಗೂ ಮುನ್ನ, ಯುಪಿ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ಅವರು ಬಿಎಸ್‌ಪಿ ಅಧಿನಾಯಕಿ ಮಾಯಾವತಿಗೆ ‘ಇಂಡಿಯಾ’ ಮೈತ್ರಿ ಬಾಗಿಲು ತೆರೆದಿದೆ ಎಂದು ಹೇಳುವ ಮೂಲಕ ರಾಜಕೀಯ ಸಂಚಲನವನ್ನು ರೂಪಿಸಿದ್ದರು,

Advertisement

ಆದರೆ ಈ ಬಗ್ಗೆ ಈಗ ಬಿಎಸ್‌ಪಿ ಮುಖ್ಯಸ್ಥೆ ನೀಡಿರುವ ಪ್ರತಿಕ್ರಿಯೆ ಮುನ್ನೆಲೆಗೆ ಬಂದಿದೆ. ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ ಮಾಯಾವತಿ, ತಾನು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಮತ್ತು ಚುನಾವಣೆಯಲ್ಲಿ ನಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ತಮ್ಮ ನಿರ್ಧಾರ ಬದಲಾಗುವುದಿಲ್ಲ ಎಂದು ಹೇಳಿದ ಮಾಯಾವತಿ, ವದಂತಿಗಳ ಬಗ್ಗೆ ಎಚ್ಚರದಿಂದಿರಿ ಎಂದು ತಮ್ಮ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದರು. ಅವರ ಪಕ್ಷ ಸ್ವಂತ ಬಲದಿಂದ ಚುನಾವಣೆಗೆ ಸ್ಪರ್ಧಿಸುತ್ತದೆ ಮತ್ತು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಇಡೀ ಸಮಾಜದ, ಅದರಲ್ಲೂ ಬಡವರು, ಶೋಷಿತರು ಹಾಗೂ ನಿರ್ಲಕ್ಷಿತರ ಹಿತಾಸಕ್ತಿ ಮತ್ತು ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಬಿಎಸ್‌ಪಿ ತನ್ನ ಜನರ ಅಭಿವೃದ್ದಿಗಾಗಿ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಸ್ವಂತ ಬಲದಿಂದ ಸ್ಪರ್ಧಿಸಲು ನಿರ್ಧರಿಸಿದೆ. ದೇಶವು ದೃಢವಾಗಿದೆ. ಜನರು ವದಂತಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: Uttar Pradesh: ಕಲ್ಕಿ ಧಾಮ್‌ ದೇವಾಲಯ ನಿರ್ಮಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

Advertisement
Advertisement

Udayavani is now on Telegram. Click here to join our channel and stay updated with the latest news.

Next