Advertisement

ಕಾಂಗ್ರೆಸ್‌ ಜತೆ ಮೈತ್ರಿ ಇಲ್ಲ; BJP ಸೋಲಿಗೆ SP-BSP ಸಾಕು: ಮಾಯಾವತಿ

12:17 PM Mar 12, 2019 | udayavani editorial |

ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಆಳುವ ಬಿಜೆಪಿಯನ್ನು ಹಣಿಯುವುದಕ್ಕೆ ಬಿಎಸ್‌ಪಿ – ಎಸ್‌ಪಿ ಮೈತ್ರಿಯೇ ಸಾಕು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಹೇಳುವ ಮೂಲಕ  ವಿಪಕ್ಷಗಳ ಮಹಾ ಮೈತ್ರಿ ಕೂಟ ರಚನೆಗೆ ಭಾರೀ ಹಿನ್ನಡೆ ಒದಗಿದಂತಾಗಿದೆ.

Advertisement

ಬಹುಜನ ಸಮಾಜ ಪಕ್ಷ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದು ಇದರಿಂದ ಕಾಂಗ್ರೆಸ್‌ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ.

ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಹೊರಡಿಸಿರುವ ಹೇಳಿಕೆಯಲ್ಲಿ, “ಬಹುಜನ ಸಮಾಜ ಪಕ್ಷ ಕಾಂಗ್ರೆಸ್‌ ಪಕ್ಷದೊಂದಿಗೆ ಯಾವುದೇ ರಾಜ್ಯದಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಂದಿಗಿನ (ಎಸ್‌ಪಿ) ಚುನಾವಣಾ ಪೂರ್ವ ಮೈತ್ರಿಯು ಪರಸ್ಪರ ಗೌರವ ಮತ್ತು ಪ್ರಾಮಾಣಿಕ ಉದ್ದೇಶಗಳ ನೆಲೆಯಲ್ಲಿ ಆದುದಾಗಿದೆ. ಆಳುವ ಬಿಜೆಪಿಯನ್ನು ಸೋಲಿಸಲು, ವಿಶೇಷವಾಗಿ ಉತ್ತರ ಪ್ರದೇಶದಲ್ಲಿ, ಎಸ್‌ಪಿ-ಬಿಎಸ್‌ಪಿ ಮೈತ್ರಿಯೊಂದೇ ಸಾಕು’ ಎಂದು ಮಾಯಾವತಿ ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next