Advertisement

ಯಾವುದೇ ಮೈತ್ರಿಯಿಲ್ಲದೆ ಚುನಾವಣೆಯನ್ನು ಬಿ ಎಸ್ ಪಿ ಎದುರಿಸಲಿದೆ : ಸತೀಶ್ ಚಂದ್ರ ಮಿಶ್ರಾ

10:50 AM Aug 02, 2021 | Team Udayavani |

ಆಗ್ರ : ಉತ್ತರ ಪ್ರದೇಸದಲ್ಲಿ ವಿಧಾನ ಸಭಾ ಚುನಾವಣೆಗೆ ಇನ್ನೇನು ಕೆಲವು ತಿಂಗಳುಗಳು ಮಾತ್ರ ಬಾಕಿ ಇರುವಾಗಲೇ ಪಕ್ಷಗಳ ಚುನಾವಣಾ ಲೆಕ್ಕಾಚಾರ ಆರಂಭವಾಗಿದೆ.

Advertisement

2022ರ ವಿಧಾನ ಸಭಾ ಚುನಾವಣೆಯನ್ನು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ಯಾವ ಮೈತ್ರಿ ಇಲ್ಲದೇ ಎದುರಿಸಲಿದೆ ಎಂದು ಹೇಳಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬಹುಜನ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ, ನಮ್ಮ ಪಕ್ಷ ಯಾಔಉದೇ ಮೈತ್ರಿ ಮಾಡಿಕೊಳ್ಳದೇ ವಿಧಾನ ಸಭಾ ಚುನಾವಣೆಯನ್ನು ಎದುರಿಸಲಿದೆ. ಪಕ್ಷ ಯಾವ ಇತರೆ ಪಕ್ಷಗಳ ಸಹಕಾರವನ್ನು ಬಯಸುವುದಿಲ್ಲ. ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ರಸ್ತೆ ಮಧ್ಯೆಯೇ ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿ

ಇನ್ನು, ಈ ಹಿಂದೆ ಜೂನ್ 27 ರಂದು,  ಬಹುಜನ ಸಮಾಜವಾದಿ ಪಕ್ಷ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಜೊತೆ ಒಪ್ಪಂದ ಮಾಡಿಕೊಂಡಿದೆ ಎಂಬ ವರದಿಯಾಗಿದ್ದನ್ನು ಪಕ್ಷ ತಳ್ಳಿ ಹಾಕಿದೆ.

Advertisement

ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ, ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಯನ್ನು ಪಕ್ಷ ಏಕಾಂಗಿಯಾಗಿ ಎದುರಿಸಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಯಾವತಿ,  ಎಐಎಂಐಎಂ ಹಾಗೂ ಬಿಎಸ್ ಪಿ ಒಪ್ಪಂದ ಮಾಡಿಕೊಂಡು ಉತ್ತರ ಪ್ರದೇಶದ ಮುಂದಿನ ವಿಧಾನ ಸಭಾ ಚುನಾವಣೆಯನ್ನು ಎದುರಿಸಲಿವೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಆದರೇ, ಬಹುಜನ ಸಮಾಜವಾದಿ ಪಕ್ಷ ಯಾವುದೇ ಸಂದರ್ಭದಲ್ಲಿಯೂ ಮೈತ್ರಿ ಮಾಡಿಕೊಳ್ಳುವುದಕ್ಕೆ ಮುಂದಾಗುವುದಿಲ್ಲ. ಪಕ್ಷ ಏಕಾಂಗಿಯಾಗಿಯೇ ಕಣಕ್ಕಿಳಿಯಲಿದೆ. ರಾಜ್ಯದಲ್ಲಿ ಮತ್ತೆ ಅಧಿಕಾರವನ್ನು ಹಿಡಿಯುವ ಭರವಸೆ ಇದೆ ಎಂದಿದ್ದರು.

ಅಂದಹಾಗೆ, ಈ ವಿಷಯದಲ್ಲಿ, ಪಂಜಾಬ್ ಹೊರತುಪಡಿಸಿ, ಯುಪಿ ಮತ್ತು ಉತ್ತರಾಖಂಡದಲ್ಲಿ … ಬಿಎಸ್ ಪಿ ಯಾವುದೇ ಪಕ್ಷದೊಂದಿಗೆ ಯಾವುದೇ ಮೈತ್ರಿಯೊಂದಿಗೆ ಕಣಕ್ಕಿಳಿಯುವುದಿಲ್ಲ ಎಂದು ಪಕ್ಷವು ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ :  ” ಕಾಶ್ಮೀರ ಪ್ರೀಮಿಯರ್‌ ಲೀಗ್‌” ನಡೆಸಲು ಮುಂದಾದ ಪಾಕಿಸ್ಥಾನ: ಬಿಸಿಸಿಐ ಆಕ್ಷೇಪ

Advertisement

Udayavani is now on Telegram. Click here to join our channel and stay updated with the latest news.

Next