Advertisement

ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಅಂಗಾರಗೆ ಮೀನುಗಾರಿಕೆ; ಎಂಟಿಬಿಗೆ ಅಬಕಾರಿ

07:53 AM Jan 21, 2021 | Team Udayavani |

ಬೆಂಗಳೂರು: ಸಂಪುಟ ವಿಸ್ತರಣೆಯ ನಂತರ ಇದೀಗ ಸಚಿವರ ಖಾತೆ ಹಂಚಿಕೆ ಹಾಗೂ ಬದಲಾವಣೆಯೂ ಬಹುತೇಕ ಪೂರ್ಣಗೊಂಡಿದ್ದು, ರಾಜ್ಯಪಾಲರ ಅಂಕಿತವಷ್ಟೇ ಬಾಕಿಯಿದೆ ಎಂದು ಹೇಳಾಗುತ್ತಿದೆ.

Advertisement

ಸಿಎಂ ಯಡಿಯೂರಪ್ಪ ಅವರು ತಮ್ಮ ಸಂಪುಟದ ಸಚಿವರ ಖಾತೆಯ ಹಂಚಿಕೆ ಪ್ರಕ್ರಿಯೆಯನ್ನು ಬುಧವಾರ ತಡರಾತ್ರಿ ಪೂರ್ಣಗೊಳಿಸಿ, ರಾಜ್ಯಪಾಲರ ಅಂಕಿತಕ್ಕೆ ಕಳು ಹಿಸಿಕೊಟ್ಟಿದ್ದು, ಗುರುವಾರ ಬೆಳಗ್ಗೆ 8 ಗಂಟೆಯೊಳಗೆ ರಾಜ್ಯಪಾಲರ ಅಂಕಿತ ಬೀಳುವ ಸಾಧ್ಯತೆಯಿದೆ.

ಇದನ್ನೂ ಓದಿ:ಆಧಾರ್‌ ಮಾನ್ಯತೆ ತೀರ್ಪು ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಸುಳ್ಯದ ಎಸ್‌. ಅಂಗಾರ (ಬಂದರು ಮತ್ತು ಮೀನುಗಾರಿಕೆ), ಕೋಟ ಶ್ರೀನಿವಾಸ ಪೂಜಾರಿ (ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ), ಉಮೇಶ್‌ ಕತ್ತಿ (ಆಹಾರ, ನಾಗರಿಕ ಪೂರೈಕೆ ಇಲಾಖೆ), ಬಸವರಾಜ ಬೊಮ್ಮಾಯಿ (ಗೃಹ, ಕಾನೂನು, ಸಂಸದೀಯ ವ್ಯವಹಾರ), ಜೆ.ಸಿ.ಮಾಧುಸ್ವಾಮಿ (ವೈದ್ಯಕೀಯ ಶಿಕ್ಷಣ, ಕನ್ನಡ-ಸಂಸ್ಕೃತಿ ಇಲಾಖೆ), ಸಿ.ಸಿ.ಪಾಟೀಲ್‌ (ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ) ಅರವಿಂದ ಲಿಂಬಾವಳಿ (ಅರಣ್ಯ), ಮುರುಗೇಶ್‌ ನಿರಾಣಿ (ಗಣಿ, ಭೂ ವಿಜ್ಞಾನ), ಎಂಟಿಬಿ ನಾಗರಾಜ್‌ (ಅಬಕಾರಿ), ಡಾ| ಕೆ. ಸುಧಾಕರ (ಆರೋಗ್ಯ), ಆನಂದ್‌ ಸಿಂಗ್‌ (ಪ್ರವಾ ಸೋದ್ಯಮ, ಪರಿಸರ ಇಲಾಖೆ), ಸಿ. ಪಿ. ಯೋಗೇಶ್ವರ್‌ (ಸಣ್ಣ ನೀರಾವರಿ), ಆರ್‌. ಶಂಕರ್‌(ಪೌರಾಡಳಿತ ಹಾಗೂ ರೇಷ್ಮೆ ಇಲಾಖೆ), ಗೋಪಾಲಯ್ಯ (ತೋಟಗಾರಿಕೆ, ಸಕ್ಕರೆ), ಕೆ.ಸಿ. ನಾರಾಯಣ ಗೌಡ(ಯುವ ಸಬಲೀಕರಣ, ಕ್ರೀಡೆ, ಹಜ್‌ ಮತ್ತು ವಕ್ಫ್) ಖಾತೆ ನೀಡಲಾಗುತ್ತದೆ ಎನ್ನಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next