Advertisement

ಬಿಎಸ್‌ವೈಗೂ ಕುಮಾರಸ್ವಾಮಿ ದುಸ್ಥಿತಿ ಬಂದಿದೆ: ಹೊರಟ್ಟಿ

11:47 PM Sep 30, 2019 | Team Udayavani |

ಹುಬ್ಬಳ್ಳಿ: ಬಿಜೆಪಿ ಹೈಕಮಾಂಡ್‌ ಸಿಎಂ ಯಡಿಯೂರಪ್ಪ ಅವರಿಗೆ ಯಾವುದೇ ಗಟ್ಟಿ ನಿರ್ಧಾರ ತೆಗೆದುಕೊಳ್ಳಲು ಬಿಡದೆ ನಿಯಂತ್ರಿಸುತ್ತಿದೆ. ಹೀಗಾಗಿ ಅವರು ಸರ್ಕಾರ ನಡೆಸುವುದು ತಂತಿ ಮೇಲೆ ನಡೆದಂತಾಗುತ್ತಿದೆ ಎಂದು ಸತ್ಯದ ಸ್ಥಿತಿ ವಿವರಿಸಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ದಿನದ 16 ಗಂಟೆ ಕೆಲಸ ಮಾಡುತ್ತಾರೆ. ಆದರೆ ಅವರಿಗೆ ಯಾವುದೇ ನಿರ್ಧಾರ ಕೈಗೊಳ್ಳಲು ಆಗುತ್ತಿಲ್ಲ. ಮೈತ್ರಿ ಸರ್ಕಾರದಲ್ಲಿ ಈ ಹಿಂದೆ ಪರಿಸ್ಥಿತಿ ಹೇಗಿತ್ತೋ ಅದೇ ರೀತಿ ಈಗ ಬಿಜೆಪಿಯಲ್ಲೂ ಆಗುತ್ತಿದೆ. ಈ ಹಿಂದೆ ಕುಮಾರಸ್ವಾಮಿ ಸಹ ಇದೇ ರೀತಿಯ ಮಾತುಗಳನ್ನಾಡುತ್ತಿದ್ದರು. ಆಗ ಬಿಜೆಪಿಯವರು ಟೀಕೆ ಮಾಡುತ್ತಿದ್ದರು. ಇದೀಗ ಅವರಿಂದಲೇ ಅಂತಹ ಮಾತುಗಳು ಹೊರಬರುತ್ತಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next