Advertisement

ಜಲಸಮಾಧಿಯಾದ ಮಂಡ್ಯದ ಏಳು ಜನರಿಗೆ 22 ಲಕ್ಷ ರೂ ಪರಿಹಾರ ಘೋಷಿಸಿದ ಬಿಎಸ್ ವೈ

02:45 PM Jun 15, 2020 | keerthan |

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜೂನ್ 14 ರಂದು ಜಲಸಮಾಧಿಯಾದ ಏಳು ಮಂದಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಟ್ಟು 22 ಲಕ್ಷ ರೂ.ಗಳ ಪರಿಹಾರವನ್ನು ಒದಗಿಸಲು ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

Advertisement

ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯ ಶ್ರೀಮತಿ ಗೀತಾ, ಕು.ಸವಿತಾ ಹಾಗೂ ಕು.ಸೌಮ್ಯ ಅವರಿಗೆ ತಲಾ 5 ಲಕ್ಷ ರೂ.ಗಳು ಹಾಗೂ ಇದೇ ತಾಲೂಕಿನ ಚೋಳಸಂದ್ರ ಗ್ರಾಮದ ಕು.ರಶ್ಮಿ ಮತ್ತು ಕು.ಇಂಚರಾ, ಕೆ.ಆರ್.ಪೇಟೆ ತಾಲ್ಲೂಕಿನ ಹುಳಿ ಗಂಗನಹಳ್ಳಿಯ ಮಾಸ್ಟರ್ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರುಗಳಿಗೆ ತಲಾ 2 ಲಕ್ಷ ರೂ.ಗಳನ್ನು ಪರಿಹಾರ ನಿಧಿಯಿಂದ ತುರ್ತಾಗಿ ನೀಡುವಂತೆ  ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next