Advertisement

ಬಿಎಸ್‌ವೈ ಕುಮ್ಮಕ್ಕಿನಿಂದ ಪ್ರತ್ಯೇಕ ರಾಜ್ಯಕ್ಕಾಗಿ ಬಂದ್‌

06:50 AM Aug 02, 2018 | |

ಬೆಂಗಳೂರು: ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರ ಪ್ರಚೋದನೆಯಿಂದ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಬಂದ್‌ ಆಚರಿಸಲಾಗುತ್ತಿದೆ ಎಂದು ಜೆಡಿಎಸ್‌ ಮುಖಂಡ ಕೋನರೆಡ್ಡಿ ಆರೋಪಿಸಿದ್ದಾರೆ.

Advertisement

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ವಿಚಾರದಲ್ಲಿ ಬಂದ್‌ಗೆ ಕರೆ ನೀಡಿದ್ದ ಹೋರಾಟಗಾರರು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಜತೆ ಚರ್ಚಿಸಿದ ನಂತರ ಸಮಾಧಾನಗೊಂಡು ಬಂದ್‌ ಕರೆ ವಾಪಸ್‌ ಪಡೆಯಲು ತೀರ್ಮಾನಿಸಿದ್ದರು. ಆದರೆ, ಬಿಜೆಪಿ ನಾಯಕರು ಅದಕ್ಕೆ ಅವಕಾಶ ಕೊಡಲಿಲ್ಲ ಎಂದು ದೂರಿದರು. ಪ್ರತ್ಯೇಕ ರಾಜ್ಯದ ವಿಚಾರದಲ್ಲಿ ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಬೇಕು. 

ಯಡಿಯೂರಪ್ಪ ಅವರು ನಾವು ಅಖಂಡ ಕರ್ನಾಟಕ ಪರ ಎಂದು ಹೇಳುತ್ತಾರೆ. ಆದರೆ, ಉಮೇಶ್‌ಕತ್ತಿ, ಶ್ರೀರಾಮುಲು
ಬೇರೆಯೇ ಹೇಳಿಕೆ ಕೊಡುತ್ತಾರೆ. ಬಿಜೆಪಿಯವರು ಮಗು ಚಿವುಟಿ, ತೊಟ್ಟಿಲು ತೂಗುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next