Advertisement
ಉದಯವಾಣಿಗೆ ದೇವೇಗೌಡರು ನೀಡಿದ್ದ ಸಂದರ್ಶನದಲ್ಲಿ ಉತ್ತರ ಕರ್ನಾಟಕ ಭಾಗದ ಹೋರಾಟಗಾರರಿಗೆ ಯಡಿಯೂರಪ್ಪ ಕುಮ್ಮಕ್ಕು ನೀಡುತ್ತಿದ್ದಾರೆಂದು ಹೇಳಿದ್ದ ಹಿನ್ನೆಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಜವಾಬ್ದಾರಿಯುತ ಪ್ರತಿಪಕ್ಷ ನಾಯಕನಾಗಿ ನನ್ನ ಕೆಲಸ ಮಾಡುತ್ತಿದ್ದೇನೆ. ದೇವೇಗೌಡರು ವಿನಾ ಕಾರಣ ನನ್ನ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
Related Articles
Advertisement
ನಮಗೆ ಅಧಿಕಾರದ ಹಪಹಪಿಯಿಲ್ಲ. ನಾವು ಪ್ರತಿಪಕ್ಷದಲ್ಲಿ ಕುಳಿತು ಕೆಲಸ ಮಾಡುತ್ತೇವೆ. ನಮ್ಮ ಹೊಣೆಗಾರಿಕೆ ಸಮರ್ಥವಾಗಿ ನಿರ್ವಹಿಸುತ್ತೇವೆ. ಪ್ರತ್ಯೇಕ ರಾಜ್ಯದ ಬೇಡಿಕೆ ಹಾಗೂ ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಆ ಭಾಗದ ಹೋರಾಟಗಾರರು ಹಾಗೂ ಮಠಾಧೀಶರು ಧರಣಿ ಕುಳಿತಿದ್ದಾಗ ಮುಖ್ಯಮಂತ್ರಿ ಸ್ಥಳಕ್ಕೆ ಹೋಗಿ ಸಮಾಧಾನ ಮಾಡಬೇಕಿತ್ತು. ಆದರೆ, ಆ ಕೆಲಸ ನಾನು ಮಾಡಿದ್ದೇನೆ. ಇದು ತಪ್ಪೇ ಎಂದರು. ಮುಖ್ಯಮಂತ್ರಿಯವರ ಗೊಂದಲದ ಹೇಳಿಕೆಗಳು ಹಾಗೂ ತೀರ್ಮಾನಗಳು ಎಲ್ಲ ಅವಾಂತರಕ್ಕೂ ಕಾರಣ. ಆದರೆ, ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದರು.