Advertisement

ಗೆದ್ದ ಎಲ್ಲಾ ಶಾಸಕರಿಗೂ ಮಂತ್ರಿ ಭಾಗ್ಯ: ಸಿಎಂ ಯಡಿಯೂರಪ್ಪ

09:50 AM Nov 24, 2019 | Team Udayavani |

ಬೆಳಗಾವಿ: ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದ ಶಾಸಕರ ಕ್ಷೇತ್ರಗಳಲ್ಲಿ ಚುನಾವಣೆ ಇದ್ದು, ಗೆದ್ದು ಬರುವ ಎಲ್ಲ ಶಾಸಕರಿಗೆ ಮಂತ್ರಿ ಭಾಗ್ಯ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಹೇಳಿದರು.‌

Advertisement

ಕಾಗವಾಡ‌ ಕ್ಷೇತ್ರದ ಶಿರಗುಪ್ಪಿಯಲ್ಲಿ ಶನಿವಾರ‌ ನಡೆದ  ಬಿಜಡಪಿ ಸಮಾವೇಶ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಶಾಸಕರು ರಾಜೀನಾಮೆ‌ ನೀಡಿದ್ದಕ್ಕಾಗಿ ನಾನು ಮುಖ್ಯಮಂತ್ರಿ ಆಗಿದ್ದೇನೆ.‌ ಅವರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮದು. ಅವರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು.‌ ಎಲ್ಲರನ್ನೂ ಮಂತ್ರಿ ಮಾಡಲಾಗುವುದು ಎಂದು ಹೇಳಿದರು.

ಎಲ್ಲ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಆಯ್ಕೆ ಆಗಲಿದ್ದಾರೆ ಎಂಬ ವಿಶ್ವಾಸ ಇದೆ. ಮೊದಲನೇ‌ ಹಂತದ ಪ್ರಚಾರ ಬಳಿಕ ಎರಡನೇ ಹಂತದಲ್ಲಿ ಮತ್ತೆ ಬೆಳಗಾವಿ ಜಿಲ್ಲೆಗೆ ಆಗಮಿಸಲಾಗುವುದು ಎಂದರು.

ಈ ಹಿಂದಿನ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಈ ಭಾಗದಲ್ಲಿ ಬಸವೇಶ್ವರ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಹಿನ್ನೆಡೆಯಾಗಿದೆ.‌ ಮುಂದಿನದಿನಗಳಲ್ಲಿ‌ ಈ ಯೋಜನೆ ಪೂರ್ಣಗೊಳಿಸಲು ಪ್ರಯತ್ನ ಮಾಡಲಾಗುವುದು.‌

ಜಿಲ್ಲೆಯಲ್ಲಿ ನದಿಗಳ ಪ್ರವಾಹದಿಂದ  ಮುಳುಗಡೆಯಾದ ಪ್ರದೇಶಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು.‌ ಇದಕ್ಕಾಗಿ ಅಗತ್ಯ ಭೂಮಿಯನ್ನು ಖರೀದಿಸಿ ನವ ನಿರ್ಮಾಣ ಮಾಡಿ ಸ್ಥಳಾಂತರಿಸಲಾಗುವುದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next