Advertisement

ಸಿಎಂ ಬಿಎಸ್ ವೈ ಆರೋಗ್ಯದಲ್ಲಿ ಮತ್ತೆ ಏರುಪೇರು! ಆಸ್ಪತ್ರೆಗೆ ದಾಖಲು

01:31 PM Apr 16, 2021 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಇಂದು ಮತ್ತೆ ಏರುಪೇರಾಗಿದ್ದು, ಎಂ.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಬುಧವಾರ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಸಿಎಂ ಬಿಎಸ್ ವೈ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಇದರಿಂದ ಅವರು ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿಸಿದ ಹೋಟೆಲ್ ಗೆ ತೆರಳಿ ವಿಶ್ರಾಂತಿ ಪಡೆದಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಶೀಘ್ರ ಕೋವಿಡ್ ಸೋಂಕು ನಿಯಂತ್ರಣಕ್ಕೆ: ಸಚಿವ ಸೋಮಣ್ಣ

ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಜೊತೆಗೆ ತುರ್ತು ಸಭೆ ನಡೆಸಿದ್ದರು. ನಂತರ ಆಸ್ಪತ್ರೆಗೆ ತೆರಳಿದ್ದು, ಸಂಜೆಯವರೆಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.

ಕೋವಿಡ್ ನೆಗೆಟಿವ್: ಸಿಎಂ ಯಡಿಯೂರಪ್ಪ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದಿದೆ.

Advertisement

ಇದನ್ನೂ ಓದಿ: ಜಿಲ್ಲಾ ಕೇಂದ್ರಗಳಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ, ಎ.20ರಂದು ಮುಂದಿನ ತೀರ್ಮಾನ:ಬಿಎಸ್ ವೈ

Advertisement

Udayavani is now on Telegram. Click here to join our channel and stay updated with the latest news.

Next