Advertisement

ರಾಜ್ಯದಲ್ಲಿ ಯಾವುದೇ ಒಬ್ಬ ವ್ಯಕ್ತಿಗೂ ನಿವೇಶನ, ಸೂರಿನ ಕೊರತೆಯಾಗಬಾರದು : ಬಿಎಸ್ ವೈ

11:49 AM Oct 20, 2020 | sudhir |

ಶಿವಮೊಗ್ಗ : ರಾಜ್ಯದಲ್ಲಿ ಯಾವುದೇ ಒಬ್ಬ ವ್ಯಕ್ತಿಗೂ ನಿವೇಶನ ಹಾಗೂ ಸೂರಿನ ಕೊರತೆಯಾಗಬಾರದು ಆ ನಿಟ್ಟಿನಲ್ಲಿ ಫಲಾನುಭವಿಗಳಿಗೆ ನಿವೇಶನ ನೀಡಿ ಮನೆ ಕಟ್ಟಿಕೊಡಬೇಕೆಂಬ ಅಪೇಕ್ಷೆ ಹೊಂದಿದ್ದೆನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

Advertisement

ಶಿವಮೊಗ್ಗದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದ ಅವರು  ಜನರ ಸಂಕಷ್ಟಕ್ಕೆ ಸ್ಪಂಧಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ಹಕ್ಕು ಪತ್ರ ತಲುಪಿಸಲಾಗುವುದು, ಯಾರಾದರೂ ಅಧಿಕಾರಿಗಳು ಲಂಚ, ಕೇಳಿದರೆ, ಅವರ ಕಿವಿ ಹಿಂಡುವ ಕೆಲಸ ಮಾಡುತ್ತೆವೆ, ಭಷ್ಟಾಚಾರ ನಡೆಯಬಾರದೆಂಬ ಉದ್ದೇಶ ನಮ್ಮದು ಎಂದು ಹೇಳಿದರು.

ಅಕ್ಟೋಬರ್ 21 ರಂದು ಉತ್ತರ ಕರ್ನಾಟಕ ವೈಮಾನಿಕ ಸಮೀಕ್ಷೆ :
ನೆರೆ ಪೀಡಿತ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಅಕ್ಟೋಬರ್ 21 ರಂದು ವೈಮಾನಿಕ ಸಮೀಕ್ಷೆ ನಡೆಸಿ ನೆರೆ ಹಾನಿಯ ಪರಿಶೀಲನೆ ನಡೆಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಈಗಾಗಲೇ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಕಾರ್ಯ ಆರಂಭವಾಗಿದೆ ಮುಂದಿನ ದಿನಗಳಲ್ಲಿ ಸಂತ್ರಸ್ಥರಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ನೀಟ್ ಫಲಿತಾಂಶದಲ್ಲೊಂದು ಮಹಾ ಪ್ರಮಾದ: ಅಗ್ರಸ್ಥಾನ ಪಡೆದ ವಿದ್ಯಾರ್ಥಿ ಫೈಲ್ ಎಂದು ಘೋಷಣೆ

Advertisement

Udayavani is now on Telegram. Click here to join our channel and stay updated with the latest news.

Next