Advertisement

ಬಿಎಸ್‌ವೈ ಮತ್ತೆ ಸಿಎಂ ಆಗೋದು ಖಚಿತ

12:40 PM Aug 13, 2018 | |

ಕೆಂಗೇರಿ: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮತ್ತೂಮ್ಮೆ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಇಲ್ಲಿನ ಶಿವಕುಮಾರ ಸ್ವಾಮಿ ಸಭಾಮಂಟಪದಲ್ಲಿ ಅಯೋಜಿಸಿದ್ದ ಬೆಂಗಳೂರು ನಗರ ಜಿಲ್ಲೆ ಯಶವಂತಪುರ ಮಂಡಲ ಆಯೋಜಿಸಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ ಪಕ್ಷ ಸಂಘಟಿಸಬೇಕು. ಕಾರ್ಯಕರ್ತರು ಬೂತ್‌ಮಟ್ಟದಲ್ಲಿ ಬಲವರ್ಧನೆ ಮಾಡಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಗದ್ದೆಗಳಿಗೆ ಭತ್ತ ನಾಟಿ ಮಾಡಿದ ಮಾತ್ರಕ್ಕೆ ರೈತರ ಸಮಸ್ಯೆಗಳಿಗೆ ಪರಿಹಾರ ದೊರೆಯುವುದಿಲ್ಲ ಎಂದು ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ನಟ ಜಗ್ಗೇಶ್‌ ಮಾತನಾಡಿ, ಸಂಘಟನಾತ್ಮಕವಾಗಿ ಸಾಗದೇ ನಾನು ಎಂದು ಮೆರೆದವರು ನಾಶವಾಗುವರು ಎನ್ನುವುದಕ್ಕೆ ಸಿದ್ದರಾಮಯ್ಯ ಅವರೇ ನಿದರ್ಶನ ಎಂದು ತಿಳಿಸಿದರು.

ಈ ವೇಳೆ ಯಶವಂತಪುರ ಮಂಡಲ ಅಧ್ಯಕ್ಷ ಮಾರೇಗೌಡ, ಪಾಲಿಕೆ ಸದಸ್ಯರಾದ ಶಾರಧ, ಜಿಪಂ ಮಾಜಿ ಸದಸ್ಯ ಶಿವಕುಮಾರ, ಪಾಲಿಕೆ ಮಾಜಿ ಸದಸ್ಯ ರ.ಅಂಜಿನಪ್ಪ, ಉಗ್ರಿ ನರಸಿಂಹಯ್ಯ, ಜೆ.ರಮೇಶ್‌, ಕೆ.ಆರ್‌.ಸುಧೀರ್‌, ಅನಿಲ್‌ ಚಳಗೇರಿ, ನವೀನ್‌ ಯಾದವ್‌, ಧನಲಕ್ಷ್ಮೀ, ಪ್ರೇಮಾ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next