Advertisement

ಪಕ್ಷದೊಳಗಿನ ವೈಮನಸ್ಸಿನಿಂದಾಗಿ ಸಿದ್ದರಾಮಯ್ಯ ಮನಬಂದಂತೆ ಮಾತನಾಡುತ್ತಿದ್ದಾರೆ: ಬಿಎಸ್ ವೈ

05:27 PM Nov 21, 2021 | Team Udayavani |

ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಕಾಂಗ್ರೆಸ್ ಗೆ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

Advertisement

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಪಕ್ಷದೊಳಗಿನ ವೈಮನಸ್ಸಿನಿಂದಾಗಿ ಸಿದ್ದರಾಮಯ್ಯ ಮನಬಂದಂತೆ ಮಾತನಾಡುತ್ತಿದ್ದಾರೆ. ವಿಧಾನಪರಿಷತ್ ಚುನಾವಣೆಯ ಫಲಿತಾಂಶದಿಂದ ಅವರು ಮತ್ತಷ್ಟು ಹತಾಶರಾಗಲಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪರ ವಾತಾವರಣ ಇದೆ. ಒಟ್ಟು 25 ಸ್ಥಾನಗಳ ಪೈಕಿ 20 ರಲ್ಲಿ ಸ್ಪರ್ಧೆ ಮಾಡಿದ್ದು ಕನಿಷ್ಠ 15 ಸ್ಥಾನಗಳನ್ನು ಗೆದ್ದು ಪರಿಷತ್ ನಲ್ಲಿ ಬಹುಮತ ಪಡೆಯುತ್ತೇವೆ ಎಂದರು.                ಪಕ್ಷದ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಮಹಾಂತೇಶ ಕವಟಗಿಮಠ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಅವರ ಜಯ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಅನೇಕ ಕಡೆಗಳಲ್ಲಿ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು ಅದರ ಬಗ್ಗೆ ಸರಕಾರ ಮತ್ತು ನಮ್ಮ ಪಕ್ಷ ವರದಿ ಪಡೆದುಕೊಳ್ಳುತ್ತಿದೆ. ವರದಿ ಬಂದ ನಂತರ ಕೇಂದ್ರಕ್ಕೆ ಸಲ್ಲಿಸಿ ಹೆಚ್ಚಿನ ಪರಿಹಾರಕ್ಕೆ ಕೋರಲಾಗುವುದು. ನಮ್ಮ ಸರಕಾರ ರೈತರ ಪರ ಇದೆ ಎಂದು ಯಡಿಯೂರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next