Advertisement

ರಾಮಮಂದಿರ ನಿರ್ಮಾಣಕ್ಕೆ ಬಲವಂತದಿಂದ ದೇಣಿಗೆ ಕೇಳುತ್ತಿಲ್ಲ : ಬಿಎಸ್‌ವೈ

12:37 AM Feb 18, 2021 | Team Udayavani |

ಶಿವಮೊಗ್ಗ : ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಲವಂತವಾಗಿ ಯಾರಲ್ಲೂ ದೇಣಿಗೆ ಕೇಳುತ್ತಿಲ್ಲ. ಈ ಕುರಿತು ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ತತ್‌ಕ್ಷಣವೇ ಇದಕ್ಕೆ ಪೂರ್ಣವಿರಾಮ ಹಾಕಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದೂ, ಮುಸ್ಲಿಂ, ಕ್ರೈಸ್ತ ಎಂಬ ಭೇದ ಇಲ್ಲದೆ ಎಲ್ಲರೂ ತಮ್ಮ ಕೈಲಾದಷ್ಟು ದೇಣಿಗೆ ನೀಡುತ್ತಿದ್ದಾರೆ. ಹೇಳಿಕೆ ನೀಡುತ್ತಿರುವವರು ದೇಣಿಗೆ ಕೊಡದಿದ್ದರೆ ಬೇಡ. ಆದರೆ ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಬಾರದು. ಬೇರೆ ಕಡೆ ಮಂದಿರ ನಿರ್ಮಿಸಿದರೆ ದೇಣಿಗೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿರುವುದು ಸರಿಯಲ್ಲ. ಇಂತಹ ಹೇಳಿಕೆಗಳು ಸುಪ್ರೀಂ ಕೋರ್ಟ್‌ ತೀರ್ಪನ್ನೇ ಪ್ರಶ್ನಿಸಿದಂತೆ. ಅವರು ಈ ರೀತಿ ಹಗುರವಾಗಿ ಮಾತನಾಡಬಾರದು ಎಂದರು.

ರಾಮನ ಹೆಸರಿನಲ್ಲಿ ಕೆಲವರು ಹಣ ಸಂಗ್ರಹಿಸಿ ದುರ್ಬಳಕೆ ಮಾಡುವ ಸಾಧ್ಯತೆ ಇದೆ. ಅವರಿಗೆ ಹಣ ಸಂಗ್ರಹಿಸಲು ಅನುಮತಿ ಕೊಟ್ಟವರು ಯಾರು? ಸಂಗ್ರಹಿಸಿದ ದೇಣಿಗೆಗೆ ಲೆಕ್ಕ ನೀಡುವವರು ಯಾರು ಎಂದು ಪ್ರಶ್ನೆ ಮಾಡಿದ್ದು ತಪ್ಪೇ?
-ಎಚ್‌.ಡಿ.ಕುಮಾರ ಸ್ವಾಮಿ, ಮಾಜಿ ಸಿಎಂ

Advertisement

Udayavani is now on Telegram. Click here to join our channel and stay updated with the latest news.

Next