Advertisement
ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಸಿಎಂ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ ಯಾಗಿ ಚರ್ಚಿಸಿದ ಬೆನ್ನಲ್ಲೇ ಸಚಿವಾಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. ಈ ನಡುವೆ ಉಪಚುನಾವಣೆಯಲ್ಲಿ ಗೆದ್ದವರಿಗಷ್ಟೇ ಸಚಿವ ಸ್ಥಾನ, ಉಳಿದವರಿಗೆ ಸಚಿವ ಸ್ಥಾನದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳುವ ಮೂಲಕ ಉಪಚುನಾವಣೆಯ ಪರಾಜಿತ ಅಭ್ಯರ್ಥಿಗಳಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂಬ ಪರೋಕ್ಷ ಸಂದೇಶ ರವಾನಿಸಿದರು. ಜತೆಗೆ ಡಿ. 25ರ ಬಳಿಕ ದಿಲ್ಲಿಗೆ ತೆರಳಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಾಗಿ ಹೇಳಿರುವುದರಿಂದ ಸಚಿವಾಕಾಂಕ್ಷಿಗಳ ಒತ್ತಡವೂ ಹೆಚ್ಚಾಗಿದೆ.
Related Articles
ಅವರನ್ನು ಭೇಟಿಯಾಗಿದ್ದರು. ಶ್ರೀರಾಮುಲು ಪರ ಸೋಮಶೇಖರ ರೆಡ್ಡಿ
ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು ಶ್ರೀರಾಮುಲು ಅವರಿಗೆ ಉಪ ಮುಖ್ಯ ಮಂತ್ರಿ ಸ್ಥಾನ ನೀಡಬೇಕು. ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಸ್ಥಾನಮಾನ ಕಲ್ಪಿಸಬೇಕು ಎಂದು ರಾಮುಲು ಪರವಾಗಿ ಸೋಮಶೇಖರ ರೆಡ್ಡಿ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ.
Advertisement
ಡಿ.21 ಇಲ್ಲವೇ 22ರಂದು ದಿಲ್ಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಲಾಗುವುದು. ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡ ಲಾಗಿತ್ತು. ಅದರಂತೆ ವರಿಷ್ಠರೊಂದಿಗೆ ಚರ್ಚಿಸಿ ಸಚಿವ ಸ್ಥಾನ ನೀಡಲಾಗುವುದು. -ಬಿ.ಎಸ್. ಯಡಿಯೂರಪ್ಪ , ಮುಖ್ಯಮಂತ್ರಿ ಪಕ್ಷದ ಸುರೇಶ್ಗೌಡ, ರವೀಂದ್ರ ಶ್ರೀಕಂಠಯ್ಯ ಅವರಷ್ಟೇ ಬಿಜೆಪಿ ಸೇರುತ್ತಾರೋ ಅಥವಾ ಇನ್ನಷ್ಟು ಮಂದಿ ಬಿಜೆಪಿ ಸೇರು ತ್ತಾರೋ ಗೊತ್ತಿಲ್ಲ. ಶಾಸಕರಿಗೆ ಈಗ ಮೊದಲಿ ನಷ್ಟು ಬೇಡಿಕೆ ಇಲ್ಲ. ಹೋದವರಿಗೂ ಪ್ರಯೋಜನವೂ ಆಗುವುದಿಲ್ಲ.
– ಬಸವರಾಜ ಹೊರಟ್ಟಿ , ಜೆಡಿಎಸ್ ನಾಯಕ