Advertisement

ಪರಿಷತ್‌ ಚುನಾವಣೆಯಲ್ಲಿ ಬೆಂಬಲಕ್ಕೆ ಎಚ್ಡಿಕೆ ಜತೆ ಚರ್ಚೆ: ಬಿಎಸ್‌ವೈ 

11:18 PM Nov 25, 2021 | Team Udayavani |

ಶಿವಮೊಗ್ಗ: ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಹೊಂದಾಣಿಕೆ ವಿಚಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜತೆಗೆ ಮಾತುಕತೆ ನಡೆಸಲಾಗಿದೆ ಎಂದು ಬಿ.ಎಸ್‌. ಯಡಿಯೂರಪ್ಪ  ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿ ಜೆಡಿಎಸ್‌ನವರು  ಸ್ಪರ್ಧಿಸಿ ಲ್ಲವೋ ಅಲ್ಲಿ ನಮಗೆ ಬೆಂಬಲ ನೀಡಲು ಅವರಲ್ಲಿ  ಮನವಿ ಮಾಡಿ ಕೊಂಡಿದ್ದೇನೆ. 25 ಕ್ಷೇತ್ರಗಳ ಪೈಕಿ 20ರಲ್ಲಿ ಬಿಜೆಪಿ ಸ್ಪ ರ್ಧಿಸಿದ್ದು, 15 ಮಂದಿ ಗೆಲ್ಲುವುದು ಖಚಿತ. ಇದರಿಂದ ವಿಧಾನ ಪರಿಷತ್‌ನಲ್ಲಿ ನಮಗೆ ಬಹುಮತ ಸಿಕ್ಕಂತಾಗುತ್ತದೆ ಎಂದು ಹೇಳಿದರು.

ಪ್ರಧಾನಿ ಮೋದಿ ಮಾರ್ಚ್‌ವರೆಗೆ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯಡಿ ಆಹಾರ ಧಾನ್ಯ ವಿತರಣೆ ಮಾಡುತ್ತೇವೆ ಎಂಬ ತೀರ್ಮಾನ ತೆಗೆದುಕೊಂಡಿರುವುದು ಸ್ವಾಗತಾರ್ಹ. ಕಾಂಗ್ರೆಸ್‌ನ ಸ್ನೇಹಿತರು ಕೇವಲ ಟೀಕೆ ಮಾಡಿಕೊಂಡು ಹೊರಟಿದ್ದಾರೆ. ಚುನಾವಣ ಫಲಿತಾಂಶ ಬಂದ ಬಳಿಕ ಅವರಿಗೆ ವಾಸ್ತವ ಸ್ಥಿತಿ ಅರಿವಾಗುತ್ತದೆ. ಅಲ್ಲಿವರೆಗೆ ಅವರ ವಿಚಾರ ನಾನೇನೂ ಮಾತನಾಡುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next