Advertisement

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಲಿದೆ: ಬಿಎಸ್ ವೈ

03:46 PM Dec 13, 2021 | Team Udayavani |

ಹುಬ್ಬಳ್ಳಿ: ಹಲವು ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾಗಿದೆ. ರಾಜ್ಯದಲ್ಲೂ ಬೆಳಗಾವಿಯ ಅಧಿವೇಶನದಲ್ಲಿ ಮಸೂದೆ ಅಂಗೀಕಾರವಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

Advertisement

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ಕಾಯ್ದೆ ನಿಷೇಧ ಜಾರಿ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದ ವಿರೋಧ ಇದ್ದೆ ಇರುತ್ತದೆ. ನಮ್ಮ ಅಪೇಕ್ಷೆ ಸಹ ನಿಷೇಧ ಮಾಡುವುದಾಗಿದೆ. ಅಧಿವೇಶನ ಮುಗಿಯುವ ಎರಡು ಮೂರು ದಿನಗಳ ಒಳಗೆ ಕಾಯ್ದೆ ಜಾರಿಯಾಗಲಿದೆ. ಇದು ಕೇವಲ ನನ್ನ ಅಭಿಪ್ರಾಯ ಅಷ್ಟೇ ಅಲ್ಲ. ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಆಡಳಿತ ಪಕ್ಷದವರು ಸೇರಿದಂತೆ ಸಂಸತ್ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು.

ಇದನ್ನೂ ಓದಿ:ವಿಶೇಷ ವಿಮಾನದಲ್ಲಿ ವಾರಾಣಸಿಗೆ ತೆರಳಿದ ಸಿಎಂ ಬಸವರಾಜ್ ಬೊಮ್ಮಾಯಿ

ಮಂಗಳವಾರ ವಿಧಾನ ಪರಿಷತ್ ಫಲಿತಾಂಶ ಬರುತ್ತೆ. ನಾವು ಕನಿಷ್ಟ 15 ಸೀಟ್ ಗಳನ್ನು ಗೆಲ್ಲುತ್ತೇವೆ. ಇದರಿಂದ ವಿಧಾನ ಪರಿಷತ್ ನಲ್ಲಿ ನಮಗೆ ಬಹುಮತ ಸಾಬೀತಾಗುತ್ತದೆ. ಜನ ನಮಗೆ ಆಶೀರ್ವಾದ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬಿಜೆಪಿ ನಾಯಕರಿಂದ ಸಹಕಾರ ಸಿಗುತ್ತಿಲ್ಲ ಎನ್ನುವ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿಕೆಯಲ್ಲಿ ಸತ್ಯಾಂಶ ಇಲ್ಲ. ಎಲ್ಲ ರೀತಿಯ ಸಹಕಾರ ಸಿಗುತ್ತಿದೆ. ಅವರು ತಮ್ಮ ಅವಧಿ ಪೂರ್ಣಗೊಳಿಸುತ್ತಾರೆ. ಬೆಳಗಾವಿ ಅಧಿವೇಶನ ಚರ್ಚೆಗಳಿಗೆ ಮತ್ತು ಹಲವು ತೀರ್ಮಾನಗಳು ಆಗುತ್ತವೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next