Advertisement

ಪರಿಸ್ಥಿತಿ ಕೈ ಮೀರಿತ್ತು.. ಮಂಗಳೂರಿನಲ್ಲಿ ಗೋಲಿಬಾರ್ ಅನಿವಾರ್ಯವಾಗಿತ್ತು: ಬಿ ಎಸ್ ವೈ

10:22 AM Dec 22, 2019 | keerthan |

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪಕ್ಕೆ ತಿರುಗಿ ಪೊಲೀಸ್ ಗುಂಡಿಗೆ ಇಬ್ಬರು ಬಲಿಯಾದ ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಗುರುವಾರ ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು. ಪರಿಸ್ಥಿತಿ ಕೈ ಮೀರಿತ್ತು. ಮಂಗಳೂರಿನ ಬಂದರ್ ಪೊಲೀಸ್ ಸ್ಟೇಶನ್ ಬಳಿಯ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಪೊಲೀಸ್ ಠಾಣೆಗೆ ನುಗ್ಗಿದ್ದರೆ ಅನಾಹುತವಾಗುತ್ತಿತ್ತು. ಹೀಗಾಗಿ ಅನಿವಾರ್ಯವಾಗಿ ಗೋಲಿಬಾರ್ ಮಾಡಲಾಯಿತು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ನಗರದ ಸರ್ಕಿಟ್ ಹೌಸ್ ನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಗೋಲಿಬಾರ್ ನಲ್ಲಿ ಮೃತರಾದವರ ಕುಟುಂಬಗಳಿಗೆ ಜಿಲ್ಲಾಧಿಕಾರಿಗಳು ಪರಿಹಾರ ಘೋಷಿಸುತ್ತಾರೆ ಎಂದರು.

ನಗರದಲ್ಲಿ ಜಾರಿಯಲ್ಲಿರುವ ಕರ್ಫ್ಯೂವನ್ನು ಇಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ತೆರವು ಮಾಡಲಾಗುವುದು. ರವಿವಾರ ರಾತ್ರಿ ಮಾತ್ರ ಕರ್ಫ್ಯೂ ಇದ್ದು, ಸೋಮವಾರದಿಂದ ಸಂಪೂರ್ಣ ತೆರವು ಮಾಡಲಾಗುವುದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next