Advertisement

BJP: ದಿನಕ್ಕೆ ಎರಡು ಜಿಲ್ಲೆಗಳಂತೆ ಬಿಎಸ್‌ವೈ ರಾಜ್ಯ ಪ್ರವಾಸ

11:27 PM Jan 05, 2024 | Team Udayavani |

ಬೆಂಗಳೂರು: ಪಕ್ಷವನ್ನು ಬಲಪಡಿಸಲು ಶೀಘ್ರವೇ ದಿನಕ್ಕೆ ಎರಡು ಜಿಲ್ಲೆಗಳಂತೆ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

Advertisement

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ಶುಕ್ರವಾರ ನಡೆದ “ಬಲವರ್ಧನೆಗಾಗಿ ಭೀಮ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ರಾಜ್ಯದ ಎಲ್ಲ ಸ್ಥಾನಗಳನ್ನು ಗೆದ್ದು, ಪ್ರಧಾನಿ ಮೋದಿ ಅವರ ಕೈ ಬಲಪಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನನ್ನ ಪ್ರವಾಸದ ವೇಳೆ ಮುಂಬರುವ ಚುನಾವಣೆ ದೃಷ್ಟಿಯಿಂದ ಪ್ರಮುಖರ ಜತೆ ಮಾತನಾಡುವೆ. ವಿಜಯೇಂದ್ರ ಅವರು ಅಧ್ಯಕ್ಷರಾದ ಬಳಿಕ ಬಿಜೆಪಿ ಹೆಚ್ಚು ಉತ್ಸಾಹ
ದಿಂದ ಕೆಲಸ ಮಾಡುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಲ ತುಂಬಲು ಅವರು ಮನವಿ ಮಾಡಿದರು.

ಕಾಂಗ್ರೆಸ್‌ನದ್ದು ಒಡೆದು ಆಳುವ ನೀತಿ
ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ನೂರಾರು ವರ್ಷಗಳ ಕಾಲ ನಮ್ಮ ದೇಶವನ್ನು ಆಡಳಿತ ನಡೆಸಿದ ಬ್ರಿಟಿಷರು ಕಾಂಗ್ರೆಸ್‌ ಪಕ್ಷಕ್ಕೆ ಒಡಕು ಮೂಡಿಸಿ ಆಡಳಿತ ನಡೆಸುವ ನೀತಿಯನ್ನು ಕೊಟ್ಟು ಹೋಗಿದ್ದಾರೆ. ಕಾಂಗ್ರೆಸ್ಸಿಗರು ಅದರ ದುರುಪಯೋಗ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷದ ಬೂಟಾಟಿಕೆಯ, ಮೋಸಗಾರಿಕೆಯ ರಾಜಕಾರಣವನ್ನು ಪ್ರಜ್ಞಾವಂತ ಜನರು ಅರ್ಥ ಮಾಡಿಕೊಂಡಿದ್ದಾರೆ ಎಂದು ವಿಶ್ಲೇಷಿಸಿದರು. ಸ್ವಾಭಿಮಾನಿ ಸಮಾವೇಶದ ಲೋಗೊವನ್ನು ಎಲ್ಲರೂ ಮೊಬೈಲ್‌ ಡಿ.ಪಿ.ಆಗಿ ಬಳಸಲು ಕೋರಲಾಯಿತು. ಅಂಬೇಡ್ಕರ್‌ ಅವರ ಪಂಚತೀರ್ಥಗಳ ಅಭಿವೃದ್ಧಿ ಕುರಿತು ವಾದಿರಾಜ್‌ ಮಾಹಿತಿ ನೀಡಿದರು.

ಸಂಸದ ಮುನಿಸ್ವಾಮಿ, ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಜಗದೀಶ್‌ ಹಿರೇಮನಿ, ಮಾಜಿ ಉಪಾಧ್ಯಕ್ಷ ಇ. ಅಶ್ವತ್ಥನಾರಾಯಣ್‌, ಎಸ್ಸಿ ಮೋರ್ಚಾ ಹಿಂದಿನ ಅಧ್ಯಕ್ಷ ಮುನಿಕೃಷ್ಣ, ಮುಖಂಡರಾದ ಸಂಪಂಗಿ, ಬಾಲರಾಜು, ಚಿ.ನಾ.ರಾಮು, ಛಲವಾದಿ ನಾರಾಯಣ ಸ್ವಾಮಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಹೇಶ್‌, ಮೇಲ್ಮನೆ ವಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಕುಡಚಿ ರಾಜೀವ್‌, ಎಸ್‌ಸಿ ಮೋರ್ಚಾ ಅಧ್ಯಕ್ಷ ಸಿಮೆಂಟ್‌ ಮಂಜು ಮತ್ತಿತರ ಪ್ರಮುಖರು ಭಾಗವಹಿಸಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next