Advertisement

ಮಹದಾಯಿ ವಿಚಾರದಲ್ಲಿ ಬಿಎಸ್‌ವೈ ಎಡವಿದ್ದಾರೆ- ಎಚ್‌ಡಿಡಿ

06:40 AM Dec 28, 2017 | Team Udayavani |

ಬೆಂಗಳೂರು:ಮಹದಾಯಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಎಡವಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

Advertisement

ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗೋವಾ ಮುಖ್ಯಮಂತ್ರಿ ಮಾತುಕತೆ ಸಿದ್ಧ ಎಂದು ಪತ್ರ ಬರೆದ ತಕ್ಷಣ ಸಮಸ್ಯೆ ಬಗೆಹರಿಯುವುದಿಲ್ಲ. ಇದು ಗೊತ್ತಿದ್ದರೂ ಯಡಿಯೂರಪ್ಪ ಎಡವಿದರು ಎಂದು ಹೇಳಿದರು.

ಪ್ರಧಾನಿ ಮಧ್ಯಸ್ಥಿಕೆಯಿಂದ ವಿವಾದ ಬಗೆಹರಿಯಲಿದೆ. ಆದರೆ, ಪ್ರಧಾನಿ ನರೇಂದ್ರಮೋದಿ ಯಾವುದಕ್ಕೂ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಮಹದಾಯಿ ಹೋರಾಟಗಾರರಿಗೂ ತಾಳ್ಮೆಯಿದೆ. ಇದು ರಾಜಕೀಯ ವಿಚಾರ ಅಲ್ಲ, ಕುಡಿಯುವ ನೀರಿನ ವಿಚಾರ. ಇದರಲ್ಲಿ ಯಾರೂ ರಾಜಕೀಯ ಮಾಡಬಾರದು. ಪ್ರಧಾನಿ ಮಧ್ಯಸ್ಥಿಕೆಯಿಂದ ಮಾತ್ರ ವಿವಾದ ಬಗೆಹರಿಯಲು ಸಾಧ್ಯ. ಕುಡಿಯುವ ನೀರು ಪೂರೈಕೆಗಾಗಿ  4 ರಿಂದ 5 ಟಿಎಂಸಿ ನೀರು ಬಿಡುಗಡೆಗೆ ಕೇಂದ್ರ ಸರ್ಕಾರ ಸೂಚನೆ ನೀಡಬಹುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next