Advertisement

1.5 ಕೋಟಿ ಲಸಿಕೆ ಕೊಡಿ : ಕೋವಿಡ್ ಸ್ಥಿತಿಗತಿ ಕುರಿತು ಪ್ರಧಾನಿಗೆ ಬಿಎಸ್‌ವೈ ಮಾಹಿತಿ

03:02 AM Jul 17, 2021 | Team Udayavani |

ಬೆಂಗಳೂರು/ಹೊಸದಿಲ್ಲಿ: ಕೊರೊನಾ ಮೂರನೇ ಅಲೆ ಆತಂಕದ ನಡುವೆ ಪ್ರಧಾನಿ ಮೋದಿ ಅವರು ಶುಕ್ರವಾರ ಆರು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವೀಡಿಯೋ ಸಂವಾದ ನಡೆಸಿದ್ದು, ಸೋಂಕಿನ ನಿಯಂತ್ರಣಕ್ಕೆ ಸೂಚನೆ ನೀಡಿದ್ದಾರೆ.

Advertisement

ರಾಜ್ಯಕ್ಕೆ ಮಾಸಿಕ 1.5 ಕೋಟಿ ಲಸಿಕೆ ನೀಡುವಂತೆ ಸಂವಾದದ ಸಂದರ್ಭ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೋದಿ ಅವರಲ್ಲಿ ಮನವಿ ಮಾಡಿದರು.

ರಾಜ್ಯದಲ್ಲಿ ಕೋವಿಡ್‌ 19 ಪ್ರಕರಣಗಳ ಸಂಖ್ಯೆ ದಿನವಹಿ ಸುಮಾರು 1,900ಕ್ಕೆ ಇಳಿದಿದೆ. ಪಾಸಿಟಿವಿಟಿ ದರ ಶೇ. 1.42ರಷ್ಟಿದ್ದು, ಮರಣ ಪ್ರಮಾಣ ಶೇ. 1.25ಕ್ಕೆ ಇಳಿದಿದೆ ಎಂದು ಬಿಎಸ್‌ವೈ ಪ್ರಧಾನಿಗೆ ವಿವರಿಸಿದರು. ಈ ವರೆಗೆ 2.62 ಕೋಟಿ ಲಸಿಕೆ ನೀಡಲಾಗಿದ್ದು, ಪ್ರತೀ ದಿನ 5 ಲಕ್ಷ ಡೋಸ್‌ಗಳಂತೆ ತಿಂಗಳಿಗೆ 1.5 ಕೋಟಿ ಡೋಸ್‌ ಲಸಿಕೆ ಒದಗಿಸುವಂತೆ ಮನವಿ ಮಾಡಿದರು.

ಅಗತ್ಯ ಸಿದ್ಧತೆ
ಕೊರೊನಾ 3ನೇ ಅಲೆಯನ್ನು ಎದುರಿಸಲು ಸರಕಾರ ಅಗ ತ್ಯ ಸಿದ್ಧತೆ ನಡೆಸಿದೆ. ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಆಮ್ಲಜನಕ ಸಹಿತ ಹಾಸಿಗೆ, ವೆಂಟಿಲೇಟರ್‌ ಹಾಸಿಗೆ ಮತ್ತು ಮಕ್ಕಳ ಐಸಿಯು ಮೊದಲಾದ ಸೌಲಭ್ಯ ಹೆಚ್ಚಿಸಲಾಗುತ್ತಿದೆ. ವೈದ್ಯರು, ದಾದಿಯರು, ಪ್ರಯೋ ಗಾಲಯ ತಂತ್ರಜ್ಞರ ಸೇವೆ ಒದಗಿಸಲಾಗುತ್ತಿದೆ. ಅಗತ್ಯ ಪರಿಕರಗಳನ್ನೂ ಸಹ ಖರೀದಿಸಲಾಗುತ್ತಿದೆ ಎಂದರು.

ಮೂಲ ಸೌಕರ್ಯ ಹೆಚ್ಚಿಸಿಕೊಳ್ಳಿ
ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ಒಡಿಶಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಮುಖ್ಯ ಮಂತ್ರಿಗಳೂ ಈ ಸಂವಾದದಲ್ಲಿ ಭಾಗಿಯಾಗಿದ್ದರು. ವಿದೇಶಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ಪರೀಕ್ಷೆ, ಪತ್ತೆ, ಚಿಕಿತ್ಸೆ ಮತ್ತು ಲಸಿಕೆ ಪ್ರಕ್ರಿಯೆಗೆ ವೇಗ ನೀಡಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next