Advertisement

ಅನರ್ಹಗೊಂಡ ಶಾಸಕರ ಜತೆ ಬಿಎಸ್‌ವೈ ಮಾತುಕತೆ

11:04 PM Sep 28, 2019 | Lakshmi GovindaRaju |

ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳಿಗೆ ಮತ್ತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತಿಯಡಿಯೂರಪ್ಪ ಅವರು ಅನರ್ಹತೆಗೊಂಡ ಹಲವು ಶಾಸಕರೊಂದಿಗೆ ಮಾತುಕತೆ ನಡೆಸಿ ಆತ್ಮವಿಶ್ವಾಸ ತುಂಬುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

Advertisement

ಗುರುವಾರವಷ್ಟೇ ಮುಂದೂಡಿಕೆಯಾಗಿದ್ದ 15 ಕ್ಷೇತ್ರಗಳ ಉಪಚುನಾವಣೆಗೆ ಹೊಸ ವೇಳಾಪಟ್ಟಿ ಶುಕ್ರವಾರ ಪ್ರಕಟವಾದ ಬೆನ್ನಲ್ಲೇ ಯಡಿಯೂರಪ್ಪ ಅನರ್ಹತೆಗೊಂಡ ಹಲವು ಶಾಸಕರಿಗೆ ಕರೆ ಮಾಡಿ ಚರ್ಚೆ ನಡೆಸಿದರು ಎಂದು ಹೇಳಲಾಗಿದೆ. ಸುಪ್ರೀಂ ತೀರ್ಪು ಅನರ್ಹತೆಗೊಂಡ ಶಾಸಕರ ಪರ ಬಂದರೆ ಪಕ್ಷದಿಂದ ಟಿಕೆಟ್‌ ನೀಡಲು ಯಾವುದೇ ಸಮಸ್ಯೆ ಇಲ್ಲ. ಒಂದೊಮ್ಮೆ ಸ್ಪರ್ಧೆಗೆ ಅವಕಾಶ ಸಿಗದಿದ್ದರೆ ಅವರು ಸೂಚಿಸುವವರಿಗೆ ಟಿಕೆಟ್‌ ನೀಡುವ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next