Advertisement

ಇಂದು ಸಂಜೆ ಅಮಿತ್ ಶಾ ಭೇಟಿಯಾಗಲಿರುವ ಬಿಎಸ್ ವೈ: ಮಹತ್ವದ ಚರ್ಚೆ

01:51 PM May 02, 2022 | Vishnudas Patil |

ಶಿಕಾರಿಪುರ: ಇಂದು ಸಂಜೆ ನಾನು ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೋಮವಾರ ಹೇಳಿಕೆ ನೀಡಿದ್ದಾರೆ.

Advertisement

ರಾಜ್ಯದ ರಾಜಕೀಯ ಪರಿಸ್ಥಿತಿ ತಿಳಿದುಕೊಳ್ಳಲು ಅಮಿತ್ ಶಾ ಬರುತಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯದ ಬಗ್ಗೆ ಹೆಚ್ಚು ಗಮನ ಕೊಡಲಿದ್ದಾರೆ.ನಾವು 150 ಕ್ಷೇತ್ರ ಗೆಲ್ಲುವ ಗುರಿ ಹೊಂದಿದ್ದೇವೆ. ಈ ಗುರಿ ತಲುಪಲು ಬೇಕಾದ ಸಲಹೆಯನ್ನು ಅಮಿತ್ ಶಾ ನೀಡಲಿದ್ದಾರೆ ಎಂದರು.

ನನ್ನ ಪ್ರಕಾರ ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂದ ಯಡಿಯೂರಪ್ಪ ಅವರು ಬಿ.ಎಲ್.ಸಂತೋಷ್ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತಿದ್ದಾರೆ.ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು ಬಿಡುವುದು ಕೇಂದ್ರ ನಾಯಕರಿಗೆ ಬಿಟ್ಟಿದ್ದು.ಈ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ ಎಂದರು.

ಪಕ್ಷ‌ಸಂಘಟಿಸುವ ಉದ್ದೇಶದಿಂದ ರಾಜ್ಯ ಪ್ರವಾಸ ಮಾಡುತಿದ್ದೇವೆ. ಬರುವ ದಿನಗಳಲ್ಲಿ‌ ನಾನು ಹಾಗೂ ನಮ್ಮ ಮುಖಂಡರು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದೇವೆ. ಪ್ರತಿ ಬೂತ್ ಬಲಪಡಿಸಲಿದ್ದೇವೆ. ಬೂತ್ ಮಟ್ಟದಲ್ಲಿ ಗೆದ್ದರೆ ಇಡಿ ರಾಜ್ಯವನ್ನೇ ಗೆದ್ದಂತೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next