Advertisement

ಸ್ವಿಟ್ಜರ್ ಲ್ಯಾಂಡ್ ನ ದಾವೋಸ್ ಗೆ ಪ್ರಯಾಣ ಬೆಳೆಸಿದ ಬಿ ಎಸ್ ಯಡಿಯೂರಪ್ಪ

09:54 AM Jan 20, 2020 | keerthan |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದಾವೋಸ್ ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಇಂದು ಬೆಂಗಳೂರಿನಿಂದ ತೆರಳಿದರು.

Advertisement

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟು, ಅಲ್ಲಿಂದ ಜ್ಯುರಿಚ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ. ಜ್ಯೂರಿಚ್ ನಿಂದ ಕಾರಿನಲ್ಲಿ ದಾವೋಸ್ ಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ವಿಶ್ವ ಆರ್ಥಿಕ ಸಮ್ಮೇಳನ ನಡೆಯಲಿದೆ. ಮುಂದಿನ ಶುಕ್ರವಾರ ಬಿ ಎಸ್ ಯಡಿಯೂರಪ್ಪ ಬೆಂಗಳೂರಿಗೆ ಆಗಮಿಸಿದ್ದಾರೆ.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಮತ್ತಿತರ ಅಧಿಕಾರಿಗಳು ಜೊತೆಗಿದ್ದರು.

Advertisement

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥ್ ನಾರಾಯಣ್, ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್, ಶಾಸಕ ಎಸ್. ಆರ್.ವಿಶ್ವನಾಥ್ ಶುಭ ಕೋರಿ ಬೀಳ್ಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next