Advertisement

BSYಗೆ ಹೊಸ ಸಂಕಷ್ಟ:ಗುಂಡ್ಲುಪೇಟೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ?

12:31 PM Apr 08, 2017 | Team Udayavani |

ಗುಂಡ್ಲುಪೇಟೆ : ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಹೊಸ ಸಂಕಷ್ಟ ಎದುರಾಗಿದ್ದು ಗುಂಡ್ಲುಪೇಟೆಯಲ್ಲಿ ಉಪಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪ ಕೇಳಿ ಬಂದಿದೆ. 

Advertisement

ಹೊಸಹಳ್ಳಿ ಗ್ರಾಮದಲ್ಲಿ ಸಾಲಭಾದೆ ಯಿಂದ ಆತ್ಮಹತ್ಯೆಗೆ ಶರಣಾದ ರೈತ ಚಿಕ್ಕಶೆಟ್ಟಿ ವಡ್ಡರ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ಹಣ ನೀಡಿರುವ ವಿಡಿಯೋವೊಂದು ಬಹಿರಂಗಗೊಂಡಿದೆ. ಈ ರೀತಿ ಹಣ ನೀಡುವುದು ಸ್ಪಷ್ಟವಾಗಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದಂತಾಗುತ್ತದೆ. 

ರೈತನ ಮನೆಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಇತರ ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿದ ಯಡಿಯೂರಪ್ಪ ಅವರು ಹಣವನ್ನು ನೀಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಅಲ್ಲದೆ ಮಾಧ್ಯಮಗಳ ಮುಂದೆಯೂ 1 ಲಕ್ಷ ರೂಪಾಯಿ ಪರಿಹಾರ ಪಕ್ಷದ ವತಿಯಿಂದ ನೀಡಿರುವುದಾಗಿ ಹೇಳಿದ್ದಾರೆ. 

ಹಣ ನೀಡುವ ವೇಳೆ ಬೆಂಬಲಿಗರು ಎಲ್ಲರೂ ಕ್ಯಾಮರಾಗಳನ್ನು ಆಫ್ ಮಾಡಿ ಎಂದಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಚುನಾವಣಾ ಆಯೋಗ ಯಾವ ಕ್ರಮ ಕೈಗೊಳ್ಳುತ್ತದೆ ಎನ್ನುವುದನ್ನು ಎದುರು ನೋಡಲಾಗುತ್ತಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next