Advertisement

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ: ಗೋಲಿಬಾರ್ ಗೆ ಬಲಿಯಾದವರ ಕುಟುಂಬಿಕರ ಭೇಟಿ

10:22 AM Dec 22, 2019 | Team Udayavani |

ಮಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶೇಷ ವಿಮಾನದಲ್ಲಿ ನಗರಕ್ಕೆ ಆಗಮಿಸಿದ್ದು ಸರ್ಕಿಟ್ ಹೌಸ್ ನಲ್ಲಿ  ಅಧಿಕಾರಿಗಳ ಸಭೆ ನಡೆಸಿದ್ದಾರೆ.

Advertisement

ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆಯ ಸಮಯದಲ್ಲಿ ಗುರುವಾರ ಪೊಲೀಸರ ಗುಂಡೇಟಿಗೆ ಬಲಿಯಾದ ಇಬ್ಬರು ಯುವಕರ ಕುಟುಂಬಿಕರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾಂಗ್ರೆಸ್ ನಾಯಕರಾದ ಐವನ್ ಡಿಸೋಜಾ, ಕೆ ಆರ್ ಹರೀಶ್ ಕುಮಾರ್ ಮುಂತಾದ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ.

ಅದಕ್ಕೂ ಮುನ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಬಿಎಸ್ ವೈ ಸಭೆ ನಡೆಸಿದರು. ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಮರ್ ಕುಮಾರ್ ಪಾಂಡೆ ಅವರ ಜೊತೆ ಪರಿಸ್ಥಿತಿಯ ಬಗ್ಗೆ ಮಾತುಕತೆ ನಡೆಸಿದರು.

Advertisement

ಸಭೆಯ ನಂತರ ಮುಖ್ಯಮಂತ್ರಿಗಳು ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಲಿದ್ದು, ಪೇಜಾವರ ಯತಿಗಳ ಆರೋಗ್ಯ ವಿಚಾರಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next