Advertisement

ಎಸ್‌.ಎಂ.ಕೃಷ್ಣ  ಜೊತೆ ಬಿಎಸ್‌ವೈ ಮಾತುಕತೆ: ಮಹತ್ವದ ರಣತಂತ್ರ 

03:47 PM Mar 16, 2019 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ಏರಿರುವ ವೇಳೆ ಹಿರಿಯ ನಾಯಕ ಎಸ್‌.ಎಂ.ಕೃಷ್ಣ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಅವರು ಶನಿವಾರ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಪ್ರಮುಖವಾಗಿ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ರಣತಂತ್ರದ ಕುರಿತಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಸದಾಶಿವನಗರದಲ್ಲಿನ ಎಸ್‌.ಎಂ.ಕೃಷ್ಣ ಅವರ ನಿವಾಸದಲ್ಲಿ ನಡೆದ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್‌.ಯಡಿಯೂರಪ್ಪ , ಕುಮಾರಸ್ವಾಮಿ ಅವರು ಅಧಿಕಾರ ಮದದಿಂದಿದ್ದಾರೆ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದರು. 

ಇದೇ ವೇಳೆ ರಾಹುಲ್‌ ಗಾಂಧಿ ಅವರು ಕರ್ನಾಟಕದಿಂದ ಸ್ಪರ್ಧಿಸಿದರೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಮೋದಿ ಅಲೆ ಇದೆ, ರಾಜ್ಯದಲ್ಲಿ 22 ಸ್ಥಾನ ಗೆಲ್ಲುವುದು ಖಚಿತ ಎಂದರು. 

ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ
ಎಸ್‌.ಎಂ.ಕೃಷ್ಣ ಅವರು ಮಾತನಾಡಿ, ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ ಪ್ರಚಾರದಲ್ಲಿ ಭಾಗಿಯಾಗುತ್ತೇನೆ ಎಂದರು. 

ಇದೇ ವೇಳೆ ನಾನು ರಾಜ್ಯಸಭೆ ಚುನಾವಣೆ ವೇಳೆ ದೇವೇಗೌಡರ ನೆರವು ಪಡೆದಿದ್ದು ಹೌದು.ಅದನ್ನ  ಬಹಿರಂಗವಾಗಿಯೇ ಹೇಳಿದ್ದೇನೆ. ಹಳೆಯ ಸಂಗತಿಗಳನ್ನು ಅಳಿಸಿ ಹಾಕುವುದು ಸಾಧ್ಯವಿಲ್ಲ ಎಂದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next