Advertisement

ಎರಡನೇ ವರ್ಷದ ಸಂಭ್ರಮದ ಬಿಎಸ್ ವೈ ಭೋಜನ ಕೂಟ ಮುಂದೂಡಿಕೆ!

01:14 PM Jul 21, 2021 | Team Udayavani |

ಬೆಂಗಳೂರು: ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆಯ ಕಾರಣದಿಂದ ಬಿಜೆಪಿ ಶಾಸಕರಿಗೆ ಜು.25 ರಂದು ರಾತ್ರಿ ನಿಗದಿಯಾಗಿದ್ದ ಭೋಜನ ಕೂಟವನ್ನು ಮುಂದೂಡಲಾಗಿದೆ.

Advertisement

ಜು.25 ರಾತ್ರಿ ಭೋಜನಕೂಟ ಮುಗಿಸಿ ಜಿಲ್ಲಾ ಉಸ್ತುವಾರಿ ಸಚಿವರುಗಳು ತಮ್ಮ ಜಿಲ್ಲೆಗಳಿಗೆ ತೆರಳಿ ಮರುದಿನ (ಜು.26) ರಂದು ಎರಡು ವರ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಭೋಜನ ಕೂಟವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆ ಶ್ರೀರಾಮುಲುಗೆ ಹೈಕಮಾಂಡ್ ಬುಲಾವ್: ಏನಿದು ಹೊಸ ಟ್ವಿಸ್ಟ್?

ಭೋಜನ ಕೂಟವು ಜುಲೈ 27 ಅಥವಾ ಬೇರೆ ದಿನಾಂಕದಂದು ನಿಗದಿಯಾಗುವ ಸಾಧ್ಯತೆಯಿದೆ.

ಜುಲೈ 26 ರಂದು ಸರ್ಕಾರದ ಎರಡು ವರ್ಷಗಳ ಸಾಧನೆ ಕುರಿತು ಮುಖ್ಯಮಂತ್ರಿಗಳು ಆಯ್ದ 10 ಜಿಲ್ಲೆಗಳ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ವಿಡಿಯೊ ಸಂವಾದ ನಡೆಸಲು ತೀರ್ಮಾನ ಮಾಡಿದ್ದಾರೆ.

Advertisement

ಶಾಸಕಾಂಗ ಸಭೆಯೂ ರದ್ದು: ಜು. 26ಕ್ಕೆ ರಾಜ್ಯ ಸರ್ಕಾರ 2 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಜು.25ರಂದು ಸಿಎಂ ಕರೆದಿದ್ದ ಶಾಸಕಾಂಗ ಪಕ್ಷದ ಸಭೆ ರದ್ದಾಗಿದೆ. ಸರ್ಕಾರ ಎರಡು ವರ್ಷ ಪೂರೈಸಿದ್ದರಿಂದಾಗಿ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಸಿಎಂ ಬಿಎಸ್‌ವೈ ನಿರ್ಧರಿಸಿದ್ದರು. ಈ ಬಗ್ಗೆ ಮಾಧ್ಯಮಗಳಿಗೂ ಅಧಿಕೃತವಾಗಿ ಹೇಳಿದ್ದರು. ಆದರೆ, ಪಕ್ಷದ ಹೈಕಮಾಂಡ್‌ ಈ ಸಂದರ್ಭದಲ್ಲಿ ಶಾಸಕಾಂಗ ಸಭೆ ನಡೆಸದಂತೆ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ.

ಜು. 25ರ ಬೆಳಿಗ್ಗೆ 11.30ಕ್ಕೆ ಕರೆದಿದ್ದ ಶಾಸಕಾಂಗ ಪಕ್ಷದ ಸಭೆಯನ್ನು ರದ್ದುಪಡಿಸಲಾಗಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಸುನೀಲ್‌ಕುಮಾರ್‌ ಪಕ್ಷದ ಶಾಸಕರಿಗೆ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಭೋಜನ ಕೂಟವೂ ರದ್ದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next