Advertisement

ಅಧಿಕಾರ ಸ್ವೀಕರಿಸುವ ಮುನ್ನವೇ ಆದೇಶ ರದ್ದು

06:15 AM Sep 22, 2018 | Team Udayavani |

ಮೈಸೂರು: ನಗರದ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್‌ ಆಯುಕ್ತರಾಗಿ ವರ್ಗಾವಣೆಗೊಂಡಿದ್ದ ಬಿ.ಟಿ.ಕವಿತಾ ಅಧಿಕಾರ ಸ್ವೀಕರಿಸುವ ಮುನ್ನವೇ ವರ್ಗಾವಣೆ ಆದೇಶ ರದ್ದುಗೊಳಿಸಲಾಗಿದೆ.

Advertisement

ಮೈಸೂರಿನ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿದ್ದ ವಿಕ್ರಂ ಆಮ್ಟೆ ಸ್ಥಾನಕ್ಕೆ ರಾಜ್ಯ ಗುಪ್ತ ವಾರ್ತೆ ಬೆಂಗಳೂರು ವಿಭಾಗದ ಅಧೀಕ್ಷಕರಾಗಿದ್ದ ಬಿ.ಟಿ.ಕವಿತಾ ಅವರನ್ನು ವರ್ಗಾವಣೆ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಅಧಿಕಾರ ಸ್ವೀಕರಿಸಲು ಬಿ.ಟಿ. ಕವಿತಾ ಗುರುವಾರ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ
ಆಗಮಿಸಿದ್ದರು. ಆದರೆ, ವಿಕ್ರಂ ಆಮ್ಟೆ ಕಚೇರಿಯಲ್ಲಿ ಹಾಜರಿರಲಿಲ್ಲ. ಈ ಹಿನ್ನೆಲೆಯಲ್ಲಿ ಕವಿತಾ ರಾತ್ರಿ 9.30ರವರೆಗೂ ಕಚೇರಿಯಲ್ಲೇ ಕಾದರು.

ಈ ವೇಳೆ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿದ್ದ ಹಿರಿಯ ಅಧಿಕಾರಿಯೊಬ್ಬರು, ಜಿಲ್ಲೆಯ ಪ್ರಮುಖ ಸಚಿವರೊಬ್ಬರನ್ನು ಭೇಟಿ ಮಾಡಿದ ನಂತರವಷ್ಟೇ ಅಧಿಕಾರ ಸ್ವೀಕರಿಸಲು ಬಿಡುವುದಾಗಿ ಕವಿತಾ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ವರ್ಗಾವಣೆಗೆ ಸಂಬಂಧಿಸಿದಂತೆ ಪೊಲೀಸ್‌ ಮಹಾನಿರ್ದೇಶಕರ ಆದೇಶವಿರುವ ಹಿನ್ನೆಲೆಯಲ್ಲಿ ರಾಜಕಾರಣಿಗಳನ್ನು ಭೇಟಿಯಾಗಲು ಕವಿತಾ ಒಪ್ಪಿಲ್ಲ. ಈ ಎಲ್ಲಾ ಬೆಳವಣಿಗೆಗಳ ನಡುವೆ ಕವಿತಾ ಅವರು ಮೈಸೂರಿನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿ ಉಪ ಕಾರ್ಯದರ್ಶಿ
ಜೆ.ಡಿ.ಮಧುಚಂದ್ರ ತೇಜಸ್ವಿ ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next