Advertisement

ಬಜೆಟ್‌ ಮಿಶ್ರ ಪ್ರತಿಕ್ರಿಯೆ: ನೇಕಾರರಿಗೆ ಕೊಂಚ ಸಮಾಧಾನ

02:00 PM Jul 08, 2023 | Team Udayavani |

ದೊಡ್ಡಬಳ್ಳಾಪುರ: ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ 2023-24ನೇ ಸಾಲಿನ ನೂತನ ಸರ್ಕಾರದ ಚೊಚ್ಚಲ ಬಜೆಟ್‌ನಲ್ಲಿ ತಾಲೂಕಿನ ಜನರು ಇಟ್ಟಿದ್ದ ನಿರೀಕ್ಷೆ ಗಳು ಈಡೇರದೇ ಬಜೆಟ್‌ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ದೊಡ್ಡಬಳ್ಳಾಪುರದ ಜೀವನಾಡಿಯಾದ ನೇಯ್ಗೆ ಉದ್ಯಮ ಸಂಕಷ್ಟದ ಲ್ಲಿದ್ದು ಕೈಮಗ್ಗ ನೇಕಾರರಿಗಿರುವ ನೇಕಾರ ಸಮ್ಮಾನ್‌ ಯೋಜನೆಯನ್ನು ವಿದ್ಯುತ್‌ ಮಗ್ಗಗಳ ನೇಕಾರರಿಗೂ ವಿಸ್ತರಿಸಿದರೆ ಮಾತ್ರ ವಾರ್ಷಿಕ 5 ಸಾವಿರ ನೆರವು ಸಿಗಲಿದೆ.

Advertisement

ಮಗ್ಗಗಳ ಮತ್ತು ಮಗ್ಗ ಪೂರ್ವ ಘಟಕಗಳಿಗೆ 10 ಎಚ್‌. ಪಿವರೆಗೆ ಮಾಸಿಕ ಗರಿಷ್ಠ 250 ಯೂನಿಟ್‌ಗಳ ವರೆಗೆ ಉಚಿತ ವಿದ್ಯುತ್‌ ಯೋಜನೆ ನೇಕಾರರಿಗೆ ನೆರ ವಾಗಲಿದೆ. ಆದರೆ, ಚುನಾವಣಾ ವೇಳೆ ನೇಕಾರರಿಗೆ 20 ಎಚ್‌.ಪಿವರೆಗೆ ಉಚಿತ ವಿದ್ಯುತ್‌ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದರು. ರಾಜ್ಯದ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್‌ಗಳ ಮೂಲಕ ನೇಕಾರರು ಪಡೆ ಯುವ ಸಾಲದ ಮೇಲೆ ಶೇ.8ರಷ್ಟು ಬಡ್ಡಿ ಸಹಾಯಧನ ಸೌಲಭ್ಯ. ನೇಕಾರರ ಮಕ್ಕಳ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ಯೋಜನೆ ಬಿಟ್ಟರೆ ನೇಯ್ಗೆ ಉದ್ಯಮವನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಯಾವುದೇ ಯೋಜನೆ ಇಲ್ಲ. ಕೈಗಾರಿಕಾ ವಸಾಹತು ವಸತಿ ಸಮುತ್ಛಯ, ಸಮುದಾಯ ಭವನ ನಿರ್ಮಾಣ, ಜವಳಿ ಹಾಗೂ ಸಿದ್ಧ ಉಡುಪು ವಲಯದ ಅಭಿವೃದ್ಧಿಗಾಗಿ ಹೊಸ ಜವಳಿ ನೀತಿಗಾಗಿ ಬಜೆಟ್‌ನಲ್ಲಿ ಮೀಸಲಿಡುವಂತೆ ನೇಕಾರರು ಒತ್ತಾಯಿಸಿದ್ದಾರೆ. ಮುಖ್ಯವಾಗಿ ನೇಕಾರರಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕಿತ್ತು ಎನ್ನುತ್ತಾರೆ ನೇಕಾರರು.

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಆಸ್ಪತ್ರೆ ಸ್ಥಾಪಿಸಲು ಯಾವುದೇ ಅನುಮೋದನೆ ಇಲ್ಲ. ವೈದ್ಯ ಕೀಯ ಮಹಾವಿದ್ಯಾಲಯಗಳ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಣಿಸುವ ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ ನೀಡಿದ್ದು ಬಿಟ್ಟರೆ, ವೃಷಭಾವತಿ ಕಣಿವೆಯಿಂದ ತ್ಯಾಜ್ಯ ಶುದ್ಧೀಕರಿಸಿದ ನೀರನ್ನು ತಾಲೂಕಿನ 90 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ ದೊರೆತಿಲ್ಲ. ಶಾಶ್ವತ ನೀರಾವರಿ ಯೋಜನೆಗೆ ಆದ್ಯತೆ ನೀಡಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡಬೆಳವಂಗಲ ಮತ್ತು ಮಧುರೆ ಹೋಬಳಿಗಳಿಗೆ ಪದವಿ ಕಾಲೇಜು ಹಾಗೂ ಸಾಸಲು ಹೋಬಳಿಗೆ ಪದವಿ ಪೂರ್ವ ಕಾಲೇಜು ಮಂಜೂರಾಗಿಲ್ಲ. ಬೆಳೆಯುತ್ತಿರುವ ತಾಲೂಕಿಗೆ ಮೂಲ ಸೌಕರ್ಯಗಳ ಕೊರತೆ ಯಿದ್ದು, ಹೆಚ್ಚಿನ ಅನುದಾನ ದೊರೆಯಬೇಕಿತ್ತು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next