Advertisement

ಜ. 31ರಿಂದ ಬಜೆಟ್‌ ಅಧಿವೇಶನ

12:30 AM Jan 10, 2019 | |

ಹೊಸದಿಲ್ಲಿ: ಕೇಂದ್ರ ಸರಕಾರದ ಬಜೆಟ್‌ ಅಧಿವೇಶನ ಜ. 31ರಿಂದ ಫೆ.13ರ ವರೆಗೆ ನಡೆಯಲಿದೆ. ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಫೆ. 1ರಂದು ಮಧ್ಯಂತರ ಬಜೆಟ್‌ ಮಂಡಿಸಲಿದ್ದಾರೆ. ರಾಜಕೀಯ ವ್ಯವಹಾರಗಳಿಗಾಗಿನ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

Advertisement

ಜ. 31ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಸಂಸತ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತ ನಾಡ ಲಿದ್ದಾರೆ. ಅದೇ ದಿನ ಆರ್ಥಿಕ ಸಮೀಕ್ಷೆಯನ್ನು ಸಂಸತ್‌ನಲ್ಲಿ ಮಂಡಿ ಸುವ ಸಾಧ್ಯತೆ ಇದೆ.  ಸಂಸತ್‌ನ ಚಳಿಗಾಲದ ಅಧಿವೇಶನ ಡಿ.11ರಿಂದ ಶುರುವಾಗಿ ಜ.8ರಂದು ಮುಕ್ತಾಯವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next