Advertisement
2020-21ನೇ ಸಾಲಿನ ಬಜೆಟ್ ಮಂಡನೆ ಬಳಿಕ ವಿಧಾನಸೌಧದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರೀಯ ತೆರಿಗೆ ಆದಾಯದಲ್ಲಿ ರಾಜ್ಯಕ್ಕೆ ಬರಬೇಕಾದ ಪಾಲಿನಲ್ಲಿ ಇಳಿಕೆ, ಜಿಎಸ್ಟಿ ಪರಿಹಾರ ಕಡಿತದಿಂದ ಸ್ವಲ್ಪ ಸಮಸ್ಯೆಯಾಗಿದೆ. 15ನೇ ಹಣಕಾಸು ಆಯೋಗದ ಶಿಫಾರಸಿನಡಿ ರಾಜ್ಯಕ್ಕೆ ಹಂಚಿಕೆ ಯಾಗುವ ಪಾಲಿನ ಮೊತ್ತವೂ ಇಳಿಕೆಯಾಗಲಿದ್ದು, 15,000 ಕೋಟಿ ರೂ. ಕಡಿಮೆಯಾಗಲಿದೆ. ಈ ವಿಚಾರಗಳನ್ನು ಮುಚ್ಚಿಟ್ಟಿಲ್ಲ. ರಾಜ್ಯದ ಸ್ವಂತ ತೆರಿಗೆ ಸಂಗ್ರಹ ಹೆಚ್ಚಿಸುವ ಮೂಲಕ ರಾಜಸ್ವ ಹೆಚ್ಚಳದ ಬಜೆಟ್ ಮಂಡಿಸಿದ್ದೇನೆ. ರಾಜಸ್ವ ಹೆಚ್ಚಳ ಮಾತ್ರವಲ್ಲದೆ, ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮದ ಇತರೆ ವಿತ್ತೀಯ ಮಾನ ದಂಡಗಳನ್ನೂ ಪಾಲಿಸಲಾಗಿದೆ. ಆರ್ಥಿಕ ಸ್ಥಿತಿಯನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.
Advertisement
ಆರ್ಥಿಕತೆ ಬಲಪಡಿಸುವ ಬಜೆಟ್: ಸಿಎಂ
09:52 AM Mar 07, 2020 | Sriram |
Advertisement
Udayavani is now on Telegram. Click here to join our channel and stay updated with the latest news.