Advertisement

ಅಯೋಧ್ಯೆಯಲ್ಲಿ ಬುದ್ಧ ಮಂದಿರ ನಿರ್ಮಿಸಿ

07:50 AM Jul 22, 2020 | Suhan S |

ಮೈಸೂರು: ಮುಂಬೈನಲ್ಲಿ ಡಾ.ಅಂಬೇಡ್ಕರ್‌ ನಿವಾಸದ ಮೇಲೆ ನಡೆದ ದಾಳಿ ಖಂಡಿಸಿ, ಅಯೋಧ್ಯೆಯಲ್ಲಿ ರಾಮಂದಿರ ನಿರ್ಮಾಣ ಸ್ಥಳದಲ್ಲಿ ಬುದ್ಧ ಮಂದಿರ ನಿರ್ಮಿಸಬೇಕೆಂದು ಒತ್ತಾಯಿಸಿ ನಾಗರಿಕ ಹಕ್ಕು ರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

Advertisement

ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಮಂಗಳವಾರ ಪ್ರತಿಭಟನೆ ನಡೆಸಿ, ದುಷ್ಕರ್ಮಿಳ ವಿರುದ್ಧ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಾಗರಿಕ ಹಕ್ಕು ರಕ್ಷಣಾ ಸಮಿತಿ ಅಧ್ಯಕ್ಷ ಗೋವಿಂದರಾಜು ಮಾತನಾಡಿ, ಬಾಂಬೇಯ ದಾದರ್‌ನಲ್ಲಿರುವ ಸಂವಿಧಾನ ಶಿಲ್ಪಿ, ಮಾನವತಾವಾದಿ ಡಾ.ಅಂಬೇಡ್ಕರ್‌ ರಾಜಗೃಹದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಇಡೀ ದೇಶವೇ ಈ ಕೃತ್ಯದಿಂದ ತಲೆ ತಗ್ಗಿಸುವಂತಾಗಿದೆ. ಆರ್ಯರ ಸಂಸ್ಕೃತಿಯನ್ನು ಹೊತ್ತು ಮೆರೆಯುವ ಹಿಂದುತ್ವವಾ ದಿಗಳು ಈ ಕೃತ್ಯವನ್ನು ಎಸಗಿರಬಹುದೆಂದು ಅನುಮಾನ ಉಂಟಾಗಿರುವುದರಿಂದ ಈ ಕೃತ್ಯ ಎಸಗಿದವರನ್ನು ಕೂಡಲೇ ಪತ್ತೆ ಹಚ್ಚಿ ದೇಶದ್ರೋಹ ಕಾಯ್ದೆಯಡಿ ದೇಶದಿಂದ ಗಡಿಪಾರು ಮಾಡಬೇಕು. ಡಾ.ಅಂಬೇಡ್ಕರ್‌ ಕುಟುಂಬಕ್ಕೆ ನಿರಂತರವಾಗಿ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ತಾರಾ, ಕೃಷ್ಣಮೂರ್ತಿ, ಕೃಷ್ಣ  ಕುಮಾರ್‌, ಮಣಿಯಮ್ಮ, ರವಿಕುಮಾರ್‌ ಪುಟ್ಟ ಮಾದು, ಪಾರ್ವತಮ್ಮ, ಕೃಷ್ಣಾಬಾಯಿ, ಇಂದ್ರಮ್ಮ, ಮಹ ಮದ್‌ ಮುನಾವರ್‌, ಭೀಮರಾಜ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next