Advertisement

ದೆಹಲಿಯಲ್ಲಿ ದುಷ್ಕರ್ಮಿಗಳಿಂದ ಗುಂಡಿಕ್ಕಿ ಬಿಲ್ಡರ್ ಬರ್ಬರ ಹತ್ಯೆ

09:50 PM Jul 02, 2022 | Team Udayavani |

ನವದೆಹಲಿ: ಪಶ್ಚಿಮ ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿ 40 ವರ್ಷದ ಬಿಲ್ಡರ್ ರೊಬ್ಬರನ್ನು ಶನಿವಾರ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಗೈದಿದ್ದಾರೆ.

Advertisement

ಮೀರಾ ಬಾಗ್‌ನ ನಿವಾಸಿ, ಬಿಲ್ಡರ್ ಅಮಿತ್ ಗೋಯಲ್ ಅವರು ತಮ್ಮ ಕಚೇರಿಯಿಂದ ಪಾರ್ಕಿಂಗ್ ಸ್ಥಳಕ್ಕೆ ಹೋಗುತ್ತಿದ್ದಾಗ ಗುಂಡು ಹಾರಿಸಿ ಹತ್ಯೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಕಾರಿನಲ್ಲಿ ಬಂದು ಗೋಯಲ್ ಮೇಲೆ ಗುಂಡು ಹಾರಿಸಿದ್ದಾರೆ. ಅವರನ್ನು ಪಶ್ಚಿಮ ವಿಹಾರ್‌ನಲ್ಲಿರುವ ಬಾಲಾಜಿ ಆಕ್ಷನ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು ಎಂದು ಪೊಲೀಸ್ ಉಪ ಆಯುಕ್ತ ಸಮೀರ್ ಶರ್ಮಾ ತಿಳಿಸಿದ್ದಾರೆ.

ಆಗಿದ್ದು, ಅವರ ಕಚೇರಿ ಜವಾಲಾ ಹೆರಿ ಮಾರುಕಟ್ಟೆಯಲ್ಲಿರುವ ವಿಕಾಸ್ ಟವರ್‌ನಲ್ಲಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ವಿಶೇಷ ಸಿಬ್ಬಂದಿ ಸೇರಿದಂತೆ ಒಂಬತ್ತು ತಂಡಗಳು ಆರೋಪಿಗಳನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಕಾರ್ಯನಿರ್ವಹಿಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next