Advertisement

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ; 2 ಬಲಿ , ಹಲವರಿಗೆ ಗಾಯ

09:04 AM Apr 06, 2019 | Vishnu Das |

ಬೆಂಗಳೂರು: ಯಶವಂತಪುರದ ಎಪಿಎಂಸಿ ಮಾರ್ಕೆಟ್‌ ಪ್ರದೇಶದಲ್ಲಿ ಶುಕ್ರವಾರ ನಸುಕಿನ ವೇಳೆ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದ್ದು, ಇಬ್ಬರು ಬಿಹಾರ ಮೂಲದ ಕಾರ್ಮಿಕರು ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಕಟ್ಟಡದ ಒಂದು ಭಾಗ ಕುಸಿದು ಅನಾಹುತ ಸಂಭವಿಸಿದೆ. ಮೃತರು ರಾಕೇಶ್‌ ಮತ್ತು ರಾಹುಲ್‌ ಎಂದು ಗುರುತಿಸಲಾಗಿದೆ.

ಆರ್‌ಎಂಸಿ ಯಾರ್ಡ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಳಪೆ ಕಾಮಗಾರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ಗುತ್ತಿಗೆದಾರ ಮತ್ತು ಇಂಜಿನಿಯರ್‌ನನ್ನು ವಶಕ್ಕೆ ಪಡೆದಿದ್ದಾರೆ.

8 ಮಂದಿ ಗಾಯಾಳುಗಳು ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲಾಗಿದ್ದು, ಆ ಪೈಕಿ ನಾಲ್ವರು ಗಂಭೀರವಾಗಿದ್ದಾರೆ ಎಂದು ತಿಳಿದು ಬಂದಿದೆ.

20 ಮಂದಿ ಅವಶೇಷಗಳಡಿಯಲ್ಲಿ ?
ಇನ್ನೂ 20 ಮಂದಿ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದ್ದು , ಸ್ಥಳದಲ್ಲಿ ಭರದಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next