Advertisement

ಸರ್ಜಾಪುರ ದಲ್ಲಿ ಕಟ್ಟಡ ಕುಸಿತ ;ಪ್ರಾಣಾಪಾಯದಲ್ಲಿ ಕಾರ್ಮಿಕರು

05:21 PM Feb 15, 2018 | Team Udayavani |

ಬೆಂಗಳೂರು: ನಗರದ ಸರ್ಜಾಪುರ ಮುಖ್ಯ ರಸ್ತೆಯಲ್ಲಿರುವ ಸವನಹಳ್ಳಿಯಲ್ಲಿ ನಿರ್ಮಾಣ ಹಂತದ 4ಅಂತಸ್ತಿನ ಕಟ್ಟಡವೊಂದು ಗುರುವಾರ ಸಂಜೆ ಕುಸಿದು ಬಿದ್ದಿದ್ದು 20 ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ.

Advertisement

ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಐವರು ಕಾರ್ಮಿಕರನ್ನು ರಕ್ಷಿಸಿರುವ ಬಗ್ಗೆ ವರದಿಯಾಗಿದ್ದು ಇನ್ನೂ 15 ಮಂದಿ ಅವಶೇಷಗಳಡಿಯಲ್ಲಿ ಸಿಲುಕಿ ರಕ್ಷಣೆಗಾಗಿ ಮೊರೆ ಇಟ್ಟಿದ್ದಾರೆ ಎಂದು ವರದಿಯಾಗಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next