Advertisement

ಬೂಕಹಳ್ಳಿ ಮಂಜು ನಾಮಪತ್ರ ಸಲ್ಲಿಕೆ

02:24 PM Nov 23, 2021 | Team Udayavani |

ಮಂಡ್ಯ: ಸಚಿವ ಕೆ.ಸಿ.ನಾರಾಯಣಗೌಡ ಅವರ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರು ನಾಮಪತ್ರ ಸಲ್ಲಿಸಿದರು.

Advertisement

ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಅಶ್ವಥಿ ಅವರಿಗೆ ಬೂಕಹಳ್ಳಿ ಮಂಜು ನಾಮಪತ್ರ ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿ ಮಂಜು ಅವರ ಪತ್ನಿ ಚಂದ್ರಕಲಾ, ಜಿಲ್ಲಾ ಬಿಜೆಪಿ ಅಧ್ಯಕ್ಷ ವಿಜಯ್ ಕುಮಾರ್, ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಸಿದ್ದರಾಮಯ್ಯ ಉಪಸ್ಥಿತರಿದ್ದರು.

ಇದನ್ನೂ ಓದಿ:ಗೋವಾದಲ್ಲಿ ಶೇ 90 ರಷ್ಟು ಕೋವಿಡ್ 2ನೇ ಡೋಸ್ ವ್ಯಾಕ್ಸಿನೇಶನ್ ಪೂರ್ಣ: ಪ್ರಮೋದ್ ಸಾವಂತ್

ನಾಮಪತ್ರ ಸಲ್ಲಿಕೆಗೂ ಮುನ್ನ ಕಲ್ಲಹಳ್ಳಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆ ಬಳಿಕ ಅಪಾರ ಪ್ರಮಾಣದ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಮೆರವಣಿಗೆ ನಡೆಸಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next