Advertisement

ಬುಲ್ಡೋಜರ್ ಬಳಕೆ ಮಾಫಿಯಾಗಳಿಗೆ ಮಾತ್ರ, ಬಡವರಿಗೆ ಅಲ್ಲ: ಅಧಿಕಾರಿಗಳಿಗೆ ಯೋಗಿ

07:54 PM Apr 08, 2022 | Team Udayavani |

ಲಕ್ನೋ : ಬುಲ್ಡೋಜರ್ ಬಳಸುವುದು ಮಾಫಿಯಾಗಳ ವಿರುದ್ಧ ಮಾತ್ರ ಹೊರತು ಬಡವರ ವಿರುದ್ಧ ಅಲ್ಲ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

Advertisement

ಅಂಗಡಿಗಳು ಮತ್ತು ಬಡವರ ಗುಡಿಸಲುಗಳನ್ನು ಕೆಡವಲು ಬುಲ್ಡೋಜರ್‌ಗಳನ್ನು ಬಳಸದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಯೋಗಿ ಶುಕ್ರವಾರ ಅಧಿಕಾರಿಗಳಿಗೆ ಸೂಚಿಸಿದರು.

ಅಪರಾಧ ಮತ್ತು ಅಪರಾಧಿಗಳ ಬಗ್ಗೆ ಶೂನ್ಯ ಸಹಿಷ್ಣುತೆಯ ತಮ್ಮ ಸರ್ಕಾರದ ಸಂಕಲ್ಪವನ್ನು ಪುನರುಚ್ಚರಿಸುವಾಗ, ಮುಖ್ಯಮಂತ್ರಿಗಳು ಬಡವರು, ಅಂಚಿನಲ್ಲಿರುವವರು ಮತ್ತು ದೀನದಲಿತರ ಬಗ್ಗೆ ಸಂವೇದನಾಶೀಲರಾಗಿರಬೇಕಾದ ಅಗತ್ಯವನ್ನು ಒತ್ತಿ ಹೇಳಿದರು.

”ಇದು ತಮ್ಮ ಸರ್ಕಾರದ ಮೂಲ ಮಂತ್ರವಾಗಿದ್ದು, ಎರಡನೇ ಅವಧಿಯಲ್ಲೂ ಇದನ್ನೇ ಅನುಸರಿಸಲಾಗುವುದು” ಎಂದು ಸಿಎಂ ಯೋಗಿ ಹೇಳಿದ್ದಾರೆ. ”ಒಂದೆಡೆ ಬಡವರ ಕಲ್ಯಾಣ ಯೋಜನೆಗಳು ಜಾರಿಯಾಗುತ್ತಿದ್ದರೆ, ರಾಜ್ಯ ಸರ್ಕಾರ ಅಪರಾಧಿಗಳಿಗೆ ಲಗಾಮು ಹಾಕುವುದನ್ನು ಖಚಿತಪಡಿಸಿಕೊಳ್ಳಲು ಯಾವುದೇ ಹಿಂಜರಿಕೆ ತೋರುತ್ತಿಲ್ಲ” ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next