Advertisement

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

11:04 AM Jul 08, 2024 | Team Udayavani |

ಬೆಂಗಳೂರು: ಅತಿ ವೇಗವಾಗಿ ಬುಲೆಟ್‌ನಲ್ಲಿ ಹೋಗುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗ್ರಿಲ್‌ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಲಹಂಕ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಬಾಗಲೂರು ನಿವಾಸಿ ಮೊಹಮ್ಮದ್‌ ಸುಹೇಲ್(25) ಮೃತ ಸವಾರ. ಗಾಯಗೊಂಡಿರುವ ಹಿಂಬದಿ ಸವಾರ ಅನಿರುದ್ಧ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶನಿವಾರ ರಾತ್ರಿ 8.30ಕ್ಕೆ ಏರ್‌ಪೋರ್ಟ್‌ ರಸ್ತೆಯ ಬಿಎಸ್‌ಎಫ್ ಕ್ಯಾಂಪ್‌ ಬಳಿ ಘಟನೆ ನಡೆದಿದೆ.

ಕೇರಳದ ಮೊಹಮ್ಮದ್‌ ಸುಹೇಲ್‌ ಇಂಡಿಗೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ನಗರದ ಬಾಗಲೂರಿನಲ್ಲಿ ಸ್ನೇಹಿತ ಅನಿರುದ್ಧ್ ಜತೆಗೆ ಬಾಡಿಗೆ ರೂಮ್‌ನಲ್ಲಿ ನೆಲೆಸಿದ್ದರು. ಶನಿವಾರ ರಾತ್ರಿ ಸುಹೇಲ್‌ ಮತ್ತು ಅನಿರುದ್ಧ ಹುಣಸಮಾರನಹಳ್ಳಿಯಲ್ಲಿ ಊಟ ಮುಗಿಸಿಕೊಂಡು ರಾಯಲ್‌ ಎನ್‌ಫೀಲ್ಡ್‌ ಬೈಕ್‌ನಲ್ಲಿ ಏರ್‌ಪೋರ್ಟ್‌ ರಸ್ತೆಯಲ್ಲಿ ನಗರದ ಕಡೆಗೆ ಬರುತ್ತಿದ್ದರು. ಈ ವೇಳೆ ಬಿಎಸ್‌ಎಫ್ ಕ್ಯಾಂಪ್‌ ಬಳಿ ಬುಲೆಟ್‌ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗದ ಗ್ರಿಲ್‌ ತಡೆಗೆ ಗೋಡೆಗೆ ಡಿಕ್ಕಿ ಹೊಡೆದುಕೊಂಡಿದ್ದಾರೆ.

ಡಿಕ್ಕಿಯ ರಭಸಕ್ಕೆ ಇಬ್ಬರು ಬುಲೆಟ್‌ ಸಮೇತ ರಸ್ತೆಗೆ ಬಿದ್ದಿದ್ದು, ಅದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸಮಿ ಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಲ್ಮೆಟ್‌ ಧರಿಸದ ಕಾರಣ ಸುಹೇಲ್‌ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.

Advertisement

Udayavani is now on Telegram. Click here to join our channel and stay updated with the latest news.

Next