Advertisement

ಅಪ್ಪನ ಕನಸು ನನಸು ಮಾಡಿದ ರಕ್ಷಕ: ಚಂದನವನಕ್ಕೆ ಕಾಲಿಟ್ಟ ದಿ.ಬುಲೆಟ್ ಪ್ರಕಾಶ್ ಪುತ್ರ

04:14 PM Jun 13, 2021 | Team Udayavani |

ಬೆಂಗಳೂರು:  ತಮ್ಮ ದಡೂತಿ ದೇಹ, ವಿಭಿನ್ನ ನಟನೆಯ ಮೂಲಕ ಎಲ್ಲರನ್ನೂ ನಕ್ಕು ನಗಿಸುತ್ತಿದ್ದ ಬುಲೆಟ್ ಪ್ರಕಾಶ ಕಾಲವಾಗಿ ವರ್ಷಗಳು ಕಳೆದಿವೆ. ದಶಕಗಳ ವರೆಗೆ ಕನ್ನಡ ಸಿನಿ ರಸಿಕರನ್ನು ನಗೆಗಡಲಿನಲ್ಲಿ ತೇಲಿಸಿದ ಈ ನಟನ ಕುಟುಂಬದ ಕುಡಿಯೊಂದು ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿದೆ.

Advertisement

ಹೌದು, ದಿವಂಗತ ನಟ ಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಕ್ ಇದೀಗ ಬೆಳ್ಳಿ ಪರದೆ ಮೇಲೆ ಮಿಂಚಲು ಸಕಲ ಸನ್ನದ್ದನಾಗಿದ್ದಾನೆ. ಈ ಸ್ಟಾರ್ ಕಿಡ್ ಅದೃಷ್ಟ ಪರೀಕ್ಷೆಗಾಗಿ ಚಂದನವನದ ಅಂಗಳಕ್ಕೆ ಕಾಲಿಡುತ್ತಿದ್ದಾನೆ.

ಹಾಸ್ಯ ನಟ ಶರಣ್ ಅವರು ನಟಿಸುತ್ತಿರುವ ಗುರು ಶಿಷ್ಯರು ಸಿನಿಮಾದಲ್ಲಿ ಅಭಿನಯಿಸುವ ಮೂಲಕ ರಕ್ಷಕ ಮುಖಕ್ಕೆ ಬಣ್ಣ ಹಾಕುತ್ತಿದ್ದಾರೆ. ಅವರು ಈ ಸಿನಿಮಾದಲ್ಲಿ ಶರಣ್ ಶಿಷ್ಯನ ಪಾತ್ರ ಮಾಡ್ತಿದ್ದಾರೆ. ನೆನಪಿರಲಿ ಪ್ರೇಮ್ ಪುತ್ರ ಏಕಾಂತ್ ಕೂಡ ಗುರುಶಿಷ್ಯರು ಸಿನಿಮಾಗಾಗಿ ಬಣ್ಣ ಹಚ್ಚಿದ್ದಾರೆ. ಇದಲ್ಲದೆ ಬಹಳಷ್ಟು ಕಲಾವಿದರ ಮಕ್ಕಳು ಗುರುಶಿಷ್ಯರು ಸಿನಿಮಾದಲ್ಲಿ ನಟಿಸಿದ್ದಾರೆ ಅನ್ನೊ ಮಾಹಿತಿ ಸಿಕ್ಕಿದೆ.

ಮಗನನ್ನ ಹೀರೋ ಮಾಡಬೇಕು ಅಂತ ಬುಲೆಟ್ ಪ್ರಕಾಶ್ ದೊಡ್ಡ ಕನಸು ಮಾಡಿದ್ದರು. ಫೈಟ್, ಡ್ಯಾನ್ಸ್, ಜಿಮ್ ಅಂತ ಆಗಲೇ ತಯಾರಿ ಆರಂಭಿಸಿದ್ದರು. ಆದ್ರೆ ಮಗ ಬಣ್ಣ ಹಚ್ಚುವ ಮೊದಲೇ ಅನಾರೋಗ್ಯದಿಂದ ಬುಲೆಟ್ ಪ್ರಕಾಶ್ ನಿಧನರಾದರು. ಅಪ್ಪನ ಆಸೆಯಂತೆ ಬುಲೆಟ್ ಸ್ನೇಹಿತರ ಮಾರ್ಗದರ್ಶನದಂತೆ ಮೊದಲ ಸಿನಿಮಾಗೆ ರಕ್ಷಕ್ ಬಣ್ಣ ಹಚ್ಚಿದ್ದಾರೆ.

ಜಡೇಶ್ ಗುರುಶಿಷ್ಯರು ಕಥೆಗೆ ಆಯಕ್ಷನ್ ಕಟ್ ಹೇಳುತ್ತಿದ್ದು, ತರುಣ ಸುಧೀರ್ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next