Advertisement

ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ : ಅನಿಲ ಸೋರಿಕೆ ಭೀತಿ

09:54 AM Aug 03, 2019 | Hari Prasad |

ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಎಂಜಿರ ಎಂಬಲ್ಲಿ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಒಂದು ಮಗುಚಿಬಿದ್ದಿದೆ.

Advertisement

ನೆಲ್ಯಾಡಿ ಪೇಟೆಯಿಂದ ಸುಮಾರು ಐದು ಕಿಲೋವೀಟರ್ ದೂರದಲ್ಲಿ ಈ ಅಪಘಾತ ಸಂಭವಿಸಿದೆ. ಈ ಭಾಗದಲ್ಲಿ ಹೆದ್ದಾರಿ ಗಾತ್ರ ತೀರಾ ಕಿರಿದಾಗಿದೆ ಮಾತ್ರವಲ್ಲದೆ ತಿರುವುಗಳಿಂದ ಕೂಡಿದ ರಸ್ತೆ ಇದಾಗಿದೆ. ಇಷ್ಟೂ ಸಾಲದೆಂಬಂತೆ ರಸ್ತೆಯ ತುಂಬೆಲ್ಲಾ ಹೊಂಡಗಳಿರುವುದರಿಂದ ಚಾಲಕರಿಗೆ ವಾಹನ ಚಲಾಯಿಸುವುದೇ ಒಂದು ಸವಾಲಾಗಿದೆ.


ಈ ಟ್ಯಾಂಕರ್ ಮಂಗಳೂರಿನ ಎಂ.ಆರ್.ಪಿ.ಎಲ್.ನಿಂದ ಅಡುಗೆ ಅನಿಲವನ್ನು ತುಂಬಿಸಿಕೊಂಡು ಬೆಂಗಳೂರು ಕಡೆಗೆ ಸಾಗುತ್ತಿತ್ತು ಎಂದು ತಿಳಿದುಬಂದಿದೆ. ಟ್ಯಾಂಕರ್ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದರಿಂದ ಈ ಭಾಗದಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸ್ವಲ್ಪ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯೂ ಉಂಟಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ.

ಈ ಪ್ರದೇಶವು ಅಪಾಯಕಾರಿ ತಿರುವು ಮಾತ್ರವಲ್ಲದೆ ಹೊಂಡಗುಂಡಿಗಳಿಂದ ಕೂಡಿದ ಹೆದ್ದಾರಿಯಾಗಿ ಮಾರ್ಪಟ್ಟಿದ್ದು ಮಳೆಗಾಲದಲ್ಲಿ ನೀರು ನಿಂತು ಹೊಂಡವನ್ನು ಅಂದಾಜಿಸಲು ವಿಫಲವಾಗಿ ಅನೇಕ ಅಫಘಾತಗಳಿಗೆ ಎಡೆ ಮಾಡಿಕೊಡುವ ಸಾಧ್ಯತೆ ಇದೆ.

ಎಂಜಿರ ಎಂಬಲ್ಲಿರುವ ಮಲೆನಾಡು ಹೋಟೆಲ್ ಬಳಿ ಈ ಅಫಘಾತ ಶುಕ್ರವಾರ ನಡೆದಿದೆ. ಅಪಘಾತದ ಬಳಿಕ ಸ್ಥಳಕ್ಕೆ ಆಗಮಿಸಿದ ನೆಲ್ಯಾಡಿ ಹೊರ ಠಾಣೆ ಯ ಪೊಲೀಸರು ರಸ್ತೆ ಸಂಚಾರವನ್ನು ನಿಯಂತ್ರಿಸಿ ವಾಹನಗಳನ್ನು ಬದಲಿ ಮಾರ್ಗದಲ್ಲಿ ಕಳಿಸುವ ವ್ಯವಸ್ಥೆ ಮಾಡುತ್ತಿದ್ದಾರೆ. ಪುತ್ತೂರು ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next